<p><strong>ಕನಕಪುರ:</strong>ನಗರಸಭೆಯಲ್ಲಿ ಕಾಂಗ್ರೆಸ್ ತನ್ನ ಭದ್ರಕೋಟೆ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಜೆಡಿಎಸ್ 4 ಸ್ಥಾನಗಳಿಗೆ ತೃಪ್ತಿಪಟ್ಟುಕೊಳ್ಳಬೇಕಾಗಿದೆ. ಬಿಜೆಪಿ ಮೊದಲ ಬಾರಿ ಒಂದು ಸ್ಥಾನ ಗೆಲ್ಲುವ ಮೂಲಕ ಖಾತೆ ತೆರೆದಿದೆ.</p>.<p>ಪುರಸಭೆಯಿಂದ ನಗರಸಭೆಯಾಗಿ ಮೇಲ್ದರ್ಜೆಗೇರಿದ ಮೇಲೆ ಇದೇ ಮೊದಲ ಬಾರಿಗೆ ಚುನಾವಣೆ ನಡೆದಿದೆ. ನಗರಸಭೆಯಲ್ಲಿ ಒಟ್ಟು 31 ಸ್ಥಾನಗಳಿದ್ದು ಅದರಲ್ಲಿ 7 ಸ್ಥಾನಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದರು. ಜೆಡಿಎಸ್ಗೆ 20 ಸ್ಥಾನ ಬಿಟ್ಟುಕೊಟ್ಟಿದ್ದ ಕಾಂಗ್ರೆಸ್ 20 ವಾರ್ಡ್ಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿತ್ತು. ಬಿಜೆಪಿ 24 ವಾರ್ಡ್ಗಳಲ್ಲಿ ಸ್ಪರ್ಧೆ ಒಡ್ಡಿತ್ತು.</p>.<p><strong>ವಿಜಯೋತ್ಸವ:</strong> ಚುನಾವಣೆಯಲ್ಲಿ ಗೆದ್ದ ಕಾಂಗ್ರೆಸ್ ಮತ್ತು ಜೆಡಿಎಸ್ ಅಭ್ಯರ್ಥಿಗಳು ತಮ್ಮ ತಮ್ಮ ವಾರ್ಡ್ಗಳಿಗೆ ತೆರಳಿ ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ವಿಜಯೋತ್ಸವ ಆಚರಿಸಿದರು. ದೇವಾಲಯಗಳಿಗೆ ತೆರಳಿ ಪೂಜೆ ನೆರವೇರಿಸಿದರು. ನಂತರ ಮತದಾರರ ಮನೆಗಳಿಗೆ ಭೇಟಿ ನೀಡಿ ಸಿಹಿ ವಿತರಿಸಿದರು.</p>.<p>ಬಿಜೆಪಿ ಜಿಲ್ಲಾಧ್ಯಕ್ಷ ಎಂ.ರುದ್ರೇಶ್ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಪಕ್ಷದ ಕಾರ್ಯಕರ್ತರು ಮತ್ತು ಅಭ್ಯರ್ಥಿಗಳಿಗೆ ಅಭಿನಂದನೆ ಸಲ್ಲಿಸಿದರು.</p>.<p>‘ನಮ್ಮ ಪಕ್ಷವು ಇಲ್ಲಿ ನಿಧಾನವಾಗಿ ಸಂಘಟನೆ ಆಗುತ್ತಿದೆ. ಅದರ ಪ್ರತಿಫಲವೇ ಇಂದು ನಗರಸಭೆಯಲ್ಲಿ 1 ಸ್ಥಾನದಲ್ಲಿ ಗೆದ್ದಿದ್ದೇವೆ, 3 ಸ್ಥಾನಗಳಲ್ಲಿ ಗೆಲುವಿನ ಸಮೀಪದಲ್ಲಿದ್ದೇವೆ’ ಎಂದರು.</p>.<p>‘ಕನಕಪುರದಲ್ಲಿ ಜೆಡಿಎಸ್ ಪಕ್ಷ ತನ್ನ ಅಸ್ತಿತ್ವ ಕಳೆದುಕೊಂಡಿದೆ. ಪಕ್ಷವು ತನ್ನ ಸ್ವಾಭಿಮಾನವನ್ನು ಕಾಂಗ್ರೆಸ್ಗೆ ಮಾರಿಕೊಂಡು ದಯನೀಯ ಪರಿಸ್ಥಿತಿಯಲ್ಲಿ ಕಾಂಗ್ರೆಸ್ಗೆ ಮಂಡಿಯೂರಿ 4 ಸ್ಥಾನಗಳನ್ನು ಪಡೆದಿರುವುದು ಮತ್ತು ಉಳಿದ ಸ್ಥಾನಗಳಲ್ಲಿ ಸ್ಪರ್ಧೆಯಿಂದ ಹಿಂದೆ ಸರಿದಿರುವುದು ಪಕ್ಷದ ವಸ್ತುಸ್ಥಿತಿಯನ್ನು ತೋರುತ್ತದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕನಕಪುರ:</strong>ನಗರಸಭೆಯಲ್ಲಿ ಕಾಂಗ್ರೆಸ್ ತನ್ನ ಭದ್ರಕೋಟೆ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಜೆಡಿಎಸ್ 4 ಸ್ಥಾನಗಳಿಗೆ ತೃಪ್ತಿಪಟ್ಟುಕೊಳ್ಳಬೇಕಾಗಿದೆ. ಬಿಜೆಪಿ ಮೊದಲ ಬಾರಿ ಒಂದು ಸ್ಥಾನ ಗೆಲ್ಲುವ ಮೂಲಕ ಖಾತೆ ತೆರೆದಿದೆ.</p>.<p>ಪುರಸಭೆಯಿಂದ ನಗರಸಭೆಯಾಗಿ ಮೇಲ್ದರ್ಜೆಗೇರಿದ ಮೇಲೆ ಇದೇ ಮೊದಲ ಬಾರಿಗೆ ಚುನಾವಣೆ ನಡೆದಿದೆ. ನಗರಸಭೆಯಲ್ಲಿ ಒಟ್ಟು 31 ಸ್ಥಾನಗಳಿದ್ದು ಅದರಲ್ಲಿ 7 ಸ್ಥಾನಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದರು. ಜೆಡಿಎಸ್ಗೆ 20 ಸ್ಥಾನ ಬಿಟ್ಟುಕೊಟ್ಟಿದ್ದ ಕಾಂಗ್ರೆಸ್ 20 ವಾರ್ಡ್ಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿತ್ತು. ಬಿಜೆಪಿ 24 ವಾರ್ಡ್ಗಳಲ್ಲಿ ಸ್ಪರ್ಧೆ ಒಡ್ಡಿತ್ತು.</p>.<p><strong>ವಿಜಯೋತ್ಸವ:</strong> ಚುನಾವಣೆಯಲ್ಲಿ ಗೆದ್ದ ಕಾಂಗ್ರೆಸ್ ಮತ್ತು ಜೆಡಿಎಸ್ ಅಭ್ಯರ್ಥಿಗಳು ತಮ್ಮ ತಮ್ಮ ವಾರ್ಡ್ಗಳಿಗೆ ತೆರಳಿ ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ವಿಜಯೋತ್ಸವ ಆಚರಿಸಿದರು. ದೇವಾಲಯಗಳಿಗೆ ತೆರಳಿ ಪೂಜೆ ನೆರವೇರಿಸಿದರು. ನಂತರ ಮತದಾರರ ಮನೆಗಳಿಗೆ ಭೇಟಿ ನೀಡಿ ಸಿಹಿ ವಿತರಿಸಿದರು.</p>.<p>ಬಿಜೆಪಿ ಜಿಲ್ಲಾಧ್ಯಕ್ಷ ಎಂ.ರುದ್ರೇಶ್ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಪಕ್ಷದ ಕಾರ್ಯಕರ್ತರು ಮತ್ತು ಅಭ್ಯರ್ಥಿಗಳಿಗೆ ಅಭಿನಂದನೆ ಸಲ್ಲಿಸಿದರು.</p>.<p>‘ನಮ್ಮ ಪಕ್ಷವು ಇಲ್ಲಿ ನಿಧಾನವಾಗಿ ಸಂಘಟನೆ ಆಗುತ್ತಿದೆ. ಅದರ ಪ್ರತಿಫಲವೇ ಇಂದು ನಗರಸಭೆಯಲ್ಲಿ 1 ಸ್ಥಾನದಲ್ಲಿ ಗೆದ್ದಿದ್ದೇವೆ, 3 ಸ್ಥಾನಗಳಲ್ಲಿ ಗೆಲುವಿನ ಸಮೀಪದಲ್ಲಿದ್ದೇವೆ’ ಎಂದರು.</p>.<p>‘ಕನಕಪುರದಲ್ಲಿ ಜೆಡಿಎಸ್ ಪಕ್ಷ ತನ್ನ ಅಸ್ತಿತ್ವ ಕಳೆದುಕೊಂಡಿದೆ. ಪಕ್ಷವು ತನ್ನ ಸ್ವಾಭಿಮಾನವನ್ನು ಕಾಂಗ್ರೆಸ್ಗೆ ಮಾರಿಕೊಂಡು ದಯನೀಯ ಪರಿಸ್ಥಿತಿಯಲ್ಲಿ ಕಾಂಗ್ರೆಸ್ಗೆ ಮಂಡಿಯೂರಿ 4 ಸ್ಥಾನಗಳನ್ನು ಪಡೆದಿರುವುದು ಮತ್ತು ಉಳಿದ ಸ್ಥಾನಗಳಲ್ಲಿ ಸ್ಪರ್ಧೆಯಿಂದ ಹಿಂದೆ ಸರಿದಿರುವುದು ಪಕ್ಷದ ವಸ್ತುಸ್ಥಿತಿಯನ್ನು ತೋರುತ್ತದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>