‘ತಮಿಳುನಾಡು ಸಹ ಕೇಂದ್ರ ಸರ್ಕಾರ ಕರ್ನಾಟಕದ ಪರ ಇದ್ದು, ನಮಗೆ ಮಲತಾಯಿ ಧೋರಣೆ ತೋರುತ್ತಿದೆ ಎಂದು ಆರೋಪಿಸಿದೆ. ಯೋಜನೆಯಿಂದ ತಮಿಳುನಾಡಿಗೆ ಯಾವುದೇ ಸಮಸ್ಯೆ ಆಗುವುದಿಲ್ಲ. ಅವರಿಗೆ ಸಲ್ಲಬೇಕಾದ ನೀರನ್ನು ಕಾಲಕಾಲಕ್ಕೆ ಕೊಡುವ ಪ್ರಯತ್ನ ಮಾಡುತ್ತಿದ್ದೇವೆ. ನಮ್ಮ ಹಕ್ಕು ನಾವು ಪಡೆದುಕೊಳ್ಳಲು ಯಾವ ಸಮಸ್ಯೆಯೂ ಇಲ್ಲ. ಈ ಬಗ್ಗೆ ಇರುವ ಕಾನೂನು ತೊಡಕನ್ನು ನಿವಾರಿಸಿಕೊಳ್ಳಲಾಗುವುದು’ ಎಂದರು.