<p><strong>ಚನ್ನಪಟ್ಟಣ:</strong> ಪಟ್ಟಣದ ಕುವೆಂಪುನಗರ 2ನೇ ಅಡ್ಡರಸ್ತೆ ಖಾಸಗಿ ನರ್ಸಿಂಗ್ ಹೋಂ ವೈದ್ಯರೊಬ್ಬರಿಗೆ ಕೋವಿಡ್ –19 ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಸೋಮವಾರ ರಸ್ತೆಯನ್ನುಸೀಲ್ ಡೌನ್ ಮಾಡಲಾಗಿದೆ.</p>.<p>ಸೋಂಕು ಕಾಣಿಸಿಕೊಂಡ ವೈದ್ಯರನ್ನು ಅದೇ ಆಸ್ಪತ್ರೆಯಲ್ಲಿ ನಿರ್ಮಿಸಿರುವ ಕೊರೊನಾ ವಿಶೇಷ ವಾರ್ಡ್ನ ದಾಖಲಿಸಲಾಗಿದೆ. ಇವರು ಹದಿನೈದು ದಿನಗಳ ಹಿಂದೆ ಕೊರೊನಾ ಪಾಸಿಟಿವ್ ಇದ್ದ ಇಬ್ಬರು ವ್ಯಕ್ತಿಗಳಿಗೆ ಚಿಕಿತ್ಸೆ ನೀಡಿದ್ದರು.</p>.<p>ವೈದ್ಯರು ಸ್ವಯಂ ಕ್ವಾರಂಟೈನ್ಗೆ ಒಳಗಾಗಿದ್ದರು. ಹಾಗಾಗಿ ಯಾವುದೇ ರೋಗಿಗಳನ್ನು ಪರೀಕ್ಷೆ ಮಾಡಿರಲಿಲ್ಲ. ಆದರೂ, ರೋಗಿಗಳ ಪಟ್ಟಿ ಸಿದ್ಧಗೊಳಿಸಲಾಗುತ್ತಿದ್ದು ಅವರನ್ನು ಪರೀಕ್ಷೆ ಮಾಡಲಾಗುವುದು ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ರಾಜು ತಿಳಿಸಿದರು.</p>.<p>ಆಸ್ಪತ್ರೆಯಲ್ಲಿರುವ ಇತರ ವೈದ್ಯರು, ನರ್ಸ್, ಸಿಬ್ಬಂದಿ ಸೇರಿದಂತೆ ಎಲ್ಲರ ಪರೀಕ್ಷೆ ನಡೆಸಲಾಗಿದ್ದು ಅವರಲ್ಲಿ ರೋಗ ಲಕ್ಷಣ ಕಂಡು ಬಂದಿಲ್ಲ. ಮತ್ತೊಮ್ಮೆ ಅವರೆಲ್ಲರ ಪರೀಕ್ಷೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು.</p>.<p><strong>ಜನರಲ್ಲಿ ಭೀತಿ: </strong>ವೈದ್ಯರಿಗೆ ಸೋಂಕು ತಗುಲಿರುವ ವಿಚಾರ ತಾಲ್ಲೂಕಿನಲ್ಲಿ ಹರಡಿ ಜನರು ಭಯಭೀತರಾಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚನ್ನಪಟ್ಟಣ:</strong> ಪಟ್ಟಣದ ಕುವೆಂಪುನಗರ 2ನೇ ಅಡ್ಡರಸ್ತೆ ಖಾಸಗಿ ನರ್ಸಿಂಗ್ ಹೋಂ ವೈದ್ಯರೊಬ್ಬರಿಗೆ ಕೋವಿಡ್ –19 ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಸೋಮವಾರ ರಸ್ತೆಯನ್ನುಸೀಲ್ ಡೌನ್ ಮಾಡಲಾಗಿದೆ.</p>.<p>ಸೋಂಕು ಕಾಣಿಸಿಕೊಂಡ ವೈದ್ಯರನ್ನು ಅದೇ ಆಸ್ಪತ್ರೆಯಲ್ಲಿ ನಿರ್ಮಿಸಿರುವ ಕೊರೊನಾ ವಿಶೇಷ ವಾರ್ಡ್ನ ದಾಖಲಿಸಲಾಗಿದೆ. ಇವರು ಹದಿನೈದು ದಿನಗಳ ಹಿಂದೆ ಕೊರೊನಾ ಪಾಸಿಟಿವ್ ಇದ್ದ ಇಬ್ಬರು ವ್ಯಕ್ತಿಗಳಿಗೆ ಚಿಕಿತ್ಸೆ ನೀಡಿದ್ದರು.</p>.<p>ವೈದ್ಯರು ಸ್ವಯಂ ಕ್ವಾರಂಟೈನ್ಗೆ ಒಳಗಾಗಿದ್ದರು. ಹಾಗಾಗಿ ಯಾವುದೇ ರೋಗಿಗಳನ್ನು ಪರೀಕ್ಷೆ ಮಾಡಿರಲಿಲ್ಲ. ಆದರೂ, ರೋಗಿಗಳ ಪಟ್ಟಿ ಸಿದ್ಧಗೊಳಿಸಲಾಗುತ್ತಿದ್ದು ಅವರನ್ನು ಪರೀಕ್ಷೆ ಮಾಡಲಾಗುವುದು ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ರಾಜು ತಿಳಿಸಿದರು.</p>.<p>ಆಸ್ಪತ್ರೆಯಲ್ಲಿರುವ ಇತರ ವೈದ್ಯರು, ನರ್ಸ್, ಸಿಬ್ಬಂದಿ ಸೇರಿದಂತೆ ಎಲ್ಲರ ಪರೀಕ್ಷೆ ನಡೆಸಲಾಗಿದ್ದು ಅವರಲ್ಲಿ ರೋಗ ಲಕ್ಷಣ ಕಂಡು ಬಂದಿಲ್ಲ. ಮತ್ತೊಮ್ಮೆ ಅವರೆಲ್ಲರ ಪರೀಕ್ಷೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು.</p>.<p><strong>ಜನರಲ್ಲಿ ಭೀತಿ: </strong>ವೈದ್ಯರಿಗೆ ಸೋಂಕು ತಗುಲಿರುವ ವಿಚಾರ ತಾಲ್ಲೂಕಿನಲ್ಲಿ ಹರಡಿ ಜನರು ಭಯಭೀತರಾಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>