ಪರಿಸರ ಸ್ವಚ್ಛತೆಗೆ ಸಂಬಂಧಿಸಿದಂತೆ ಭಾರತದ ಎನ್ಸಿಸಿ ಘಟಕವು ವಿಶ್ವಸಂಸ್ಥೆಯೊಂದಿಗೆ ಒಪ್ಪಂದ ಮಾಡಿಕೊಂಡಂತೆ ನದಿ, ಸಮುದ್ರ, ಕೆರೆಯ ದಂಡೆಯ ಮೇಲಿರುವ ಪ್ಲಾಸ್ಟಿಕ್ ತಾಜ್ಯವನ್ನು ಸಂಗ್ರಹಿಸುವ ಮತ್ತು ಸ್ವಚ್ಛಗೊಳಿಸುವ ಕೆಲಸ ಮಾಡುತ್ತಿದ್ದು ಇಂದು ಇಲ್ಲಿನ ಅರ್ಕಾವತಿ ನದಿ ಪಾತ್ರದಲ್ಲಿನ ಪ್ಲಾಸ್ಟಿಕ್ ಮತ್ತು ಮದ್ಯದ ಬಾಟಲಿಗಳನ್ನು ಎನ್ಸಿಸಿ ವಿದ್ಯಾರ್ಥಿಗಳು ಸಂಗ್ರಹಿಸಿದ್ದಾರೆ ಎಂದು ಎನ್ಸಿಸಿ ಅಧಿಕಾರಿ ಲೆಪ್ಟಿನೆಂಟ್ ವಿಜಯೇಂದ್ರ ಎಂ.ಜೆ. ಮಾಹಿತಿ ನೀಡಿದರು.