<p><strong>ಕನಕಪುರ:</strong> ಇಲ್ಲಿನ ರೂರಲ್ ಎಜುಕೇಶನ್ ಸೊಸೈಟಿಯ ರೂರಲ್ ಕಾಲೇಜಿನಲ್ಲಿ ಬುಧವಾರ ಸಾಂಸ್ಕೃತಿಕ ಕಾರ್ಯಕ್ರಮದ ಸಮಾರೋಪ ಸಮಾರಂಭ ನಡೆಯಿತು.</p>.<p>ಈ ವೇಳೆ ಮೈಸೂರು ಮುಕ್ತ ವಿಶ್ವವಿದ್ಯಾಲಯ ಉಪ ಕುಲಪತಿ ಶರಣಪ್ಪ ಹಲ್ಸೆ ಮಾತನಾಡಿ, ವಿದ್ಯಾರ್ಥಿ ಜೀವನದಲ್ಲಿ ಶಿಸ್ತು ಮತ್ತು ಗುರಿ ಮುಖ್ಯ. ಉತ್ತಮ ವ್ಯಕ್ತಿತ್ವ ರೂಪಿಸಿಕೊಂಡಾಗ ಮಾತ್ರ ಉತ್ತಮರಾಗಿ ರೂಪುಗೊಳ್ಳಲು ಸಾಧ್ಯ ಎಂದು ಅಭಿಪ್ರಾಯಪಟ್ಟರು.</p>.<p>ವಿದ್ಯಾರ್ಥಿಗಳು ಗುರುವಿನ ಮಹತ್ವ ಅರಿತು ನಡೆದರೆ ಸಮಾಜದಲ್ಲಿ ಉತ್ತಮ ಪ್ರಜೆಗಳಾಗಲು ಸಾಧ್ಯ. ಅದನ್ನು ಅರ್ಥ ಮಾಡಿಕೊಳ್ಳುವ ವಿವೇಕ ಮತ್ತು ವಯಸ್ಸು ನಿಮ್ಮದಾಗಿದೆ ಎಂದರು.</p>.<p>ಹುಣಸೂರು ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ರಾಮೇಗೌಡ ಮಾತನಾಡಿ, ನಾನು ಕಾಲೇಜಿನಲ್ಲಿ ಉತ್ತಮ ಪ್ರಾಂಶುಪಾಲರಾಗಿ ಹೊರಹೊಮ್ಮಲು ರೂರಲ್ ಕಾಲೇಜು ಕಾರಣ ಎಂದು ಸ್ಮರಿಸಿದರು.</p>.<p>ಆರ್ಇಎಸ್ ಅಧ್ಯಕ್ಷ ಎಚ್.ಕೆ.ಶ್ರೀಕಂಠ, ಪುಟ್ಟಸ್ವಾಮಿ, ಮಂಜುನಾಥ್, ಎಂ.ಟಿ.ಬಾಲಕೃಷ್ಣ, ದೇವರಾಜು, ಡಾ.ಅಪ್ಪಾಜಿ, ಡಾ.ತಮ್ಮಣ್ಣ ಗೌಡ ಸೇರಿದಂತೆ ಎಲ್ಲಾ ಬೋಧಕ, ಬೋಧಕೇತರ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕನಕಪುರ:</strong> ಇಲ್ಲಿನ ರೂರಲ್ ಎಜುಕೇಶನ್ ಸೊಸೈಟಿಯ ರೂರಲ್ ಕಾಲೇಜಿನಲ್ಲಿ ಬುಧವಾರ ಸಾಂಸ್ಕೃತಿಕ ಕಾರ್ಯಕ್ರಮದ ಸಮಾರೋಪ ಸಮಾರಂಭ ನಡೆಯಿತು.</p>.<p>ಈ ವೇಳೆ ಮೈಸೂರು ಮುಕ್ತ ವಿಶ್ವವಿದ್ಯಾಲಯ ಉಪ ಕುಲಪತಿ ಶರಣಪ್ಪ ಹಲ್ಸೆ ಮಾತನಾಡಿ, ವಿದ್ಯಾರ್ಥಿ ಜೀವನದಲ್ಲಿ ಶಿಸ್ತು ಮತ್ತು ಗುರಿ ಮುಖ್ಯ. ಉತ್ತಮ ವ್ಯಕ್ತಿತ್ವ ರೂಪಿಸಿಕೊಂಡಾಗ ಮಾತ್ರ ಉತ್ತಮರಾಗಿ ರೂಪುಗೊಳ್ಳಲು ಸಾಧ್ಯ ಎಂದು ಅಭಿಪ್ರಾಯಪಟ್ಟರು.</p>.<p>ವಿದ್ಯಾರ್ಥಿಗಳು ಗುರುವಿನ ಮಹತ್ವ ಅರಿತು ನಡೆದರೆ ಸಮಾಜದಲ್ಲಿ ಉತ್ತಮ ಪ್ರಜೆಗಳಾಗಲು ಸಾಧ್ಯ. ಅದನ್ನು ಅರ್ಥ ಮಾಡಿಕೊಳ್ಳುವ ವಿವೇಕ ಮತ್ತು ವಯಸ್ಸು ನಿಮ್ಮದಾಗಿದೆ ಎಂದರು.</p>.<p>ಹುಣಸೂರು ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ರಾಮೇಗೌಡ ಮಾತನಾಡಿ, ನಾನು ಕಾಲೇಜಿನಲ್ಲಿ ಉತ್ತಮ ಪ್ರಾಂಶುಪಾಲರಾಗಿ ಹೊರಹೊಮ್ಮಲು ರೂರಲ್ ಕಾಲೇಜು ಕಾರಣ ಎಂದು ಸ್ಮರಿಸಿದರು.</p>.<p>ಆರ್ಇಎಸ್ ಅಧ್ಯಕ್ಷ ಎಚ್.ಕೆ.ಶ್ರೀಕಂಠ, ಪುಟ್ಟಸ್ವಾಮಿ, ಮಂಜುನಾಥ್, ಎಂ.ಟಿ.ಬಾಲಕೃಷ್ಣ, ದೇವರಾಜು, ಡಾ.ಅಪ್ಪಾಜಿ, ಡಾ.ತಮ್ಮಣ್ಣ ಗೌಡ ಸೇರಿದಂತೆ ಎಲ್ಲಾ ಬೋಧಕ, ಬೋಧಕೇತರ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>