ನಂತರ ಮಾತನಾಡಿದ ಅವರು, ಹಿರಿಯ ಮುತ್ಸದ್ದಿ ನಾಯಕ ಆರ್.ಎಲ್.ಜಾಲಪ್ಪ ಅವರು ಕೇಂದ್ರ ಸರ್ಕಾರದಲ್ಲಿ ಸಚಿವರಾಗಿದ್ದಾಗ ಮೊದಲ ಬಾರಿಗೆ ರೈತರ ಸಂಕಷ್ಟಕ್ಕೆ ನೆರವಾದ ಕರುಣಾಳು. ಸಹಕಾರಿ ಸಂಸ್ಥೆಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರಿಗೆ ಮೀಸಲಾತಿ ಕಲ್ಪಿಸಿದ್ದ ಸಾಮಾಜಿಕ ನ್ಯಾಯದ ಹರಿಕಾರರು. ದೀನದಲಿತರ ಮತ್ತು ಹಿಂದುಳಿದವರ ಮಕ್ಕಳ ಶಿಕ್ಷಣಕ್ಕೆ ಆದ್ಯತೆ ನೀಡಿರುವ ಮಾನವತಾವಾದಿ ಎಂದರು.