<p><strong>ಬಿಡದಿ: </strong>ಕೆಂಚನಕುಪ್ಪೆ ಜನತಾ ಕಾಲೊನಿಯಲ್ಲಿ ಗ್ರಾಮ ಪಂಚಾಯಿತಿ ಕಾರ್ಯಲಯವಾಗಿ ಹಿಂದೆ ಕಾರ್ಯ ನಿರ್ವಹಿಸುತ್ತಿದ್ದ ಕಟ್ಟಡವು ಇದೀಗ ನಾದುರಸ್ತಿ ಸ್ಥಿತಿಯಲ್ಲಿದೆ.</p>.<p>ಇದನ್ನು ಪುರಸಭೆ ವ್ಯಾಪ್ತಿಗೆ ಸೇರಿಸಿದ ಬಳಿಕ ವಾಣಿಜ್ಯ ಮಳಿಗೆಗಳಾಗಿ ಗುರುತಿಸಲಾಗಿತ್ತು. ಆದರೆ, ಬೆಂಗಳೂರು –ಮೈಸೂರು ರಾಷ್ಟ್ರೀಯ ಹೆದ್ದಾರಿಯ ಅಗಲ ವಿಸ್ತರಿಸುವಾಗ ಕಟ್ಟಡದ ಕೆಲವೊಂದು ಭಾಗವನ್ನು ತೆರವುಗೊಳಿಸಲಾಗಿತ್ತು. ಸುಮಾರು ಒಂದೂವರೆ ವರ್ಷದಿಂದ ಈ ಕಟ್ಟಡವನ್ನು ನವೀಕರಣ ಮಾಡಲು ಪುರಸಭೆಯಿಂದ ಸಾಧ್ಯವಾಗುತ್ತಿಲ್ಲ.</p>.<p>‘ಹಿಂದೆ ಹಲವು ಬಾರಿ ಸಾಮಾನ್ಯ ಸಭೆಯಲ್ಲಿ ನಾವು ಈ ವಿಷಯವನ್ನು ಪ್ರಸ್ತಾಪ ಮಾಡಿದ್ದೇನೆ. ಕಟ್ಟಡ ನವೀಕರಿಸಿದರೆ ಪುರಸಭೆಗೆ ತಿಂಗಳಿಗೆ ಸುಮಾರು ₹30 ರಿಂದ 40 ಸಾವಿರ ಆದಾಯ ಬರಬಹುದು’ ಎಂದು ಪುರಸಭೆ ಸದಸ್ಯ ಕುಮಾರ್ ತಿಳಿಸಿದರು. ‘ಆದರೆ, ಆಡಳಿತ ಅಧಿಕಾರಿಗಳು ಯಾವುದೇ ರೀತಿಯ ಮನ್ನಣೆ ನೀಡುತ್ತಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದರು.</p>.<p>‘ಕಟ್ಟಡ ಈಗ ಅನಾಥವಾಗಿದ್ದು ಅನೈತಿಕ ಚಟುವಟಿಕೆಗಳ ತಾಣವಾಗಿ ಪರಿವರ್ತನೆಗೊಂಡಿದೆ’ ಎಂದರು.</p>.<p>ಪುರಸಭೆಯ ಮುಖ್ಯಾಧಿಕಾರಿ ಚೇತನ್ ಕೊಳವಿ ಅವರನ್ನು ಪ್ರಶ್ನಿಸಿದಾಗ, ಕೂಡಲೇ ಟೆಂಡರ್ ಕರೆದು ಆಧುನೀಕರಿಸಿ, ಪುರಸಭೆ ವಾಣಿಜ್ಯ ಮಳಿಗೆಗಳಿಗಾಗಿ ನವೀಕರಿಸಲಾಗುವುದು. ಬಳಿಕ ಬಾಡಿಗೆಗೆ ನೀಡಲಾಗುವುದು ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಿಡದಿ: </strong>ಕೆಂಚನಕುಪ್ಪೆ ಜನತಾ ಕಾಲೊನಿಯಲ್ಲಿ ಗ್ರಾಮ ಪಂಚಾಯಿತಿ ಕಾರ್ಯಲಯವಾಗಿ ಹಿಂದೆ ಕಾರ್ಯ ನಿರ್ವಹಿಸುತ್ತಿದ್ದ ಕಟ್ಟಡವು ಇದೀಗ ನಾದುರಸ್ತಿ ಸ್ಥಿತಿಯಲ್ಲಿದೆ.</p>.<p>ಇದನ್ನು ಪುರಸಭೆ ವ್ಯಾಪ್ತಿಗೆ ಸೇರಿಸಿದ ಬಳಿಕ ವಾಣಿಜ್ಯ ಮಳಿಗೆಗಳಾಗಿ ಗುರುತಿಸಲಾಗಿತ್ತು. ಆದರೆ, ಬೆಂಗಳೂರು –ಮೈಸೂರು ರಾಷ್ಟ್ರೀಯ ಹೆದ್ದಾರಿಯ ಅಗಲ ವಿಸ್ತರಿಸುವಾಗ ಕಟ್ಟಡದ ಕೆಲವೊಂದು ಭಾಗವನ್ನು ತೆರವುಗೊಳಿಸಲಾಗಿತ್ತು. ಸುಮಾರು ಒಂದೂವರೆ ವರ್ಷದಿಂದ ಈ ಕಟ್ಟಡವನ್ನು ನವೀಕರಣ ಮಾಡಲು ಪುರಸಭೆಯಿಂದ ಸಾಧ್ಯವಾಗುತ್ತಿಲ್ಲ.</p>.<p>‘ಹಿಂದೆ ಹಲವು ಬಾರಿ ಸಾಮಾನ್ಯ ಸಭೆಯಲ್ಲಿ ನಾವು ಈ ವಿಷಯವನ್ನು ಪ್ರಸ್ತಾಪ ಮಾಡಿದ್ದೇನೆ. ಕಟ್ಟಡ ನವೀಕರಿಸಿದರೆ ಪುರಸಭೆಗೆ ತಿಂಗಳಿಗೆ ಸುಮಾರು ₹30 ರಿಂದ 40 ಸಾವಿರ ಆದಾಯ ಬರಬಹುದು’ ಎಂದು ಪುರಸಭೆ ಸದಸ್ಯ ಕುಮಾರ್ ತಿಳಿಸಿದರು. ‘ಆದರೆ, ಆಡಳಿತ ಅಧಿಕಾರಿಗಳು ಯಾವುದೇ ರೀತಿಯ ಮನ್ನಣೆ ನೀಡುತ್ತಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದರು.</p>.<p>‘ಕಟ್ಟಡ ಈಗ ಅನಾಥವಾಗಿದ್ದು ಅನೈತಿಕ ಚಟುವಟಿಕೆಗಳ ತಾಣವಾಗಿ ಪರಿವರ್ತನೆಗೊಂಡಿದೆ’ ಎಂದರು.</p>.<p>ಪುರಸಭೆಯ ಮುಖ್ಯಾಧಿಕಾರಿ ಚೇತನ್ ಕೊಳವಿ ಅವರನ್ನು ಪ್ರಶ್ನಿಸಿದಾಗ, ಕೂಡಲೇ ಟೆಂಡರ್ ಕರೆದು ಆಧುನೀಕರಿಸಿ, ಪುರಸಭೆ ವಾಣಿಜ್ಯ ಮಳಿಗೆಗಳಿಗಾಗಿ ನವೀಕರಿಸಲಾಗುವುದು. ಬಳಿಕ ಬಾಡಿಗೆಗೆ ನೀಡಲಾಗುವುದು ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>