<p><strong>ಮಾಗಡಿ: </strong>ಕೇಂದ್ರದ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ನೀತಿ ವಿರುದ್ಧ ತಿಪ್ಪಸಂದ್ರದಲ್ಲಿ ಕಾಂಗ್ರೆಸ್ ಪಕ್ಷದಿಂದ ಸಾಂಕೇತಿಕ ಪ್ರತಿಭಟನೆ ನಡೆಯಿತು.</p>.<p>ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ.ಎಸ್. ಕುಮಾರ್ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಬಡವರ ಪರವಾಗಿ ಆಡಳಿತ ನಡೆಸುತ್ತಿಲ್ಲ. ಆರ್.ಎಸ್.ಎಸ್. ಮುಖಂಡರ ಸಲಹೆಯಂತೆ ಸಿರಿವಂತರ ಪರವಾಗಿ ಸರ್ಕಾರದ ಬೊಕ್ಕಸವನ್ನು ಲೂಟಿ ಮಾಡುತ್ತಿದ್ದಾರೆ ಎಂದು ದೂರಿದರು.</p>.<p>ರಾವಣನ ದೇಶ ಶ್ರೀಲಂಕಾದಲ್ಲಿ ಪೆಟ್ರೋಲ್ ಲೀಟರ್ಗೆ ₹ 50 ಇದೆ. ಶ್ರೀರಾಮನ ರಾಷ್ಟ್ರದಲ್ಲಿ ಲೀಟರ್ ಪೆಟ್ರೋಲ್ ₹ 100 ದಾಟಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರ ಜನಸಾಮಾನ್ಯರನ್ನು ಬಲಿ ಪಡೆದಿವೆ ಎಂದು ದೂರಿದರು.</p>.<p>ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ಎಸ್. ಗಂಗಾಧರ್ ಮಾತನಾಡಿ, ಕೊರೊನಾ ಸಂಕಟಕ್ಕೆ ಸಿಲುಕಿದ ಜನಗಳಿಗೆ ಸೂಕ್ತ ಸವಲತ್ತು ಒದಗಿಸಿಲ್ಲ. ಲಕ್ಷಾಂತರ ಜನರ ಸಾವಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರ ಕಾರಣವಾಗಿವೆ. ಬೆಡ್ ದಂಧೆಯಲ್ಲಿಯೇ ಬಿಜೆಪಿ ಶಾಸಕರು ಬಡಿದಾಡಿಕೊಳ್ಳುತ್ತಿದ್ದಾರೆ. ಈ ಸಮಯದಲ್ಲಿ ಇಂಧನ ಬೆಲೆ ಹೆಚ್ಚಿಸಿರುವುದು ಜನವಿರೋಧಿ ನೀತಿಯಾಗಿದೆ. ಇದರಿಂದ ಎಲ್ಲ ವರ್ಗದವರು ತೊಂದರೆಗೆ ಸಿಲುಕಿದ್ದಾರೆ ಎಂದು ಟೀಕಿಸಿದರು.</p>.<p>ಕಾಂಗ್ರೆಸ್ ಕಾರ್ಯಕರ್ತರು<br />ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಾಗಡಿ: </strong>ಕೇಂದ್ರದ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ನೀತಿ ವಿರುದ್ಧ ತಿಪ್ಪಸಂದ್ರದಲ್ಲಿ ಕಾಂಗ್ರೆಸ್ ಪಕ್ಷದಿಂದ ಸಾಂಕೇತಿಕ ಪ್ರತಿಭಟನೆ ನಡೆಯಿತು.</p>.<p>ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ.ಎಸ್. ಕುಮಾರ್ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಬಡವರ ಪರವಾಗಿ ಆಡಳಿತ ನಡೆಸುತ್ತಿಲ್ಲ. ಆರ್.ಎಸ್.ಎಸ್. ಮುಖಂಡರ ಸಲಹೆಯಂತೆ ಸಿರಿವಂತರ ಪರವಾಗಿ ಸರ್ಕಾರದ ಬೊಕ್ಕಸವನ್ನು ಲೂಟಿ ಮಾಡುತ್ತಿದ್ದಾರೆ ಎಂದು ದೂರಿದರು.</p>.<p>ರಾವಣನ ದೇಶ ಶ್ರೀಲಂಕಾದಲ್ಲಿ ಪೆಟ್ರೋಲ್ ಲೀಟರ್ಗೆ ₹ 50 ಇದೆ. ಶ್ರೀರಾಮನ ರಾಷ್ಟ್ರದಲ್ಲಿ ಲೀಟರ್ ಪೆಟ್ರೋಲ್ ₹ 100 ದಾಟಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರ ಜನಸಾಮಾನ್ಯರನ್ನು ಬಲಿ ಪಡೆದಿವೆ ಎಂದು ದೂರಿದರು.</p>.<p>ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ಎಸ್. ಗಂಗಾಧರ್ ಮಾತನಾಡಿ, ಕೊರೊನಾ ಸಂಕಟಕ್ಕೆ ಸಿಲುಕಿದ ಜನಗಳಿಗೆ ಸೂಕ್ತ ಸವಲತ್ತು ಒದಗಿಸಿಲ್ಲ. ಲಕ್ಷಾಂತರ ಜನರ ಸಾವಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರ ಕಾರಣವಾಗಿವೆ. ಬೆಡ್ ದಂಧೆಯಲ್ಲಿಯೇ ಬಿಜೆಪಿ ಶಾಸಕರು ಬಡಿದಾಡಿಕೊಳ್ಳುತ್ತಿದ್ದಾರೆ. ಈ ಸಮಯದಲ್ಲಿ ಇಂಧನ ಬೆಲೆ ಹೆಚ್ಚಿಸಿರುವುದು ಜನವಿರೋಧಿ ನೀತಿಯಾಗಿದೆ. ಇದರಿಂದ ಎಲ್ಲ ವರ್ಗದವರು ತೊಂದರೆಗೆ ಸಿಲುಕಿದ್ದಾರೆ ಎಂದು ಟೀಕಿಸಿದರು.</p>.<p>ಕಾಂಗ್ರೆಸ್ ಕಾರ್ಯಕರ್ತರು<br />ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>