ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ಎಸ್. ಗಂಗಾಧರ್ ಮಾತನಾಡಿ, ಕೊರೊನಾ ಸಂಕಟಕ್ಕೆ ಸಿಲುಕಿದ ಜನಗಳಿಗೆ ಸೂಕ್ತ ಸವಲತ್ತು ಒದಗಿಸಿಲ್ಲ. ಲಕ್ಷಾಂತರ ಜನರ ಸಾವಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರ ಕಾರಣವಾಗಿವೆ. ಬೆಡ್ ದಂಧೆಯಲ್ಲಿಯೇ ಬಿಜೆಪಿ ಶಾಸಕರು ಬಡಿದಾಡಿಕೊಳ್ಳುತ್ತಿದ್ದಾರೆ. ಈ ಸಮಯದಲ್ಲಿ ಇಂಧನ ಬೆಲೆ ಹೆಚ್ಚಿಸಿರುವುದು ಜನವಿರೋಧಿ ನೀತಿಯಾಗಿದೆ. ಇದರಿಂದ ಎಲ್ಲ ವರ್ಗದವರು ತೊಂದರೆಗೆ ಸಿಲುಕಿದ್ದಾರೆ ಎಂದು ಟೀಕಿಸಿದರು.