ಈ ವೇಳೆ ವೇದಿಕೆಗೆ ಆಗಮಿಸಿದ ಮಂಜುನಾಥ್ ಅವರು ಸಿ.ಎಂ. ಲಿಂಗಪ್ಪ ಅವರನ್ನು ವೇದಿಕೆ ಕರೆದರು. ಇದಕ್ಕೆ ಪ್ರತಿಕ್ರಿಯಿಸಿದ ಲಿಂಗಪ್ಪ, ‘ನನ್ನನ್ನು ಕಾಟಾಚಾರಕ್ಕೆ ಆಹ್ವಾನಿಸಲಾಗಿದೆ’ ಎಂದು ಆರೋಪಿಸಿದರು. ಇದಕ್ಕೆ ಧ್ವನಿಗೂಡಿಸಿದ ಗಾಣಕಲ್ ನಟರಾಜ್ ಪುರಸಭೆಗೆ ಬಂದಿರುವ ಅನುದಾನವನ್ನು ಶಾಸಕರು ಕಾಂಗ್ರೆಸ್ ಸದಸ್ಯರ ಗಮನಕ್ಕೆ ತಂದಿಲ್ಲ ಎಂದು ದೂರಿದರು. ಇದಕ್ಕೆ ಜೆಡಿಎಸ್ ಸದಸ್ಯರು ಆಕ್ಷೇಪಿಸಿದರು. ಇದರೊಂದಿಗೆ ಮಾತಿನ ಚಕಮಕಿ ಆರಂಭವಾಗಿ, ಎರಡು ಪಕ್ಷದ ಮುಖಂಡರ ನಡುವೆ ಪರಸ್ಪರ ಕೈ ಮೀಲಾಯಿಸುವ ಹಂತಕ್ಕೆ ತಲುಪಿತು. ಪೊಲೀಸರು ಮಧ್ಯ ಪ್ರವೇಶಿಸಿ ಎರಡು ಪಕ್ಷದ ಮುಖಂಡರನ್ನು ಸಮಾಧಾನಪಡಿಸಿದರು. ಪರಿಸ್ಥಿತಿಯನ್ನು ತಿಳಿಗೊಳಿಸಿದರು.