ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾದಯಾತ್ರೆ: ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ವಾಹನಗಳ ಸಂಚಾರ ಮಾರ್ಗ ಬದಲು

Last Updated 12 ಜನವರಿ 2022, 11:18 IST
ಅಕ್ಷರ ಗಾತ್ರ

ರಾಮನಗರ: ಕಾಂಗ್ರೆಸ್ ಹಮ್ಮಿಕೊಂಡಿರುವ ಮೇಕೆದಾಟು ಪಾದಯಾತ್ರೆ ರಾಮನಗರ ಪ್ರವೇಶಿಸಿದ್ದು, ಇದೇ 13, 14ರಂದು ಬೆಂಗಳೂರು - ಮೈಸೂರು ಹೆದ್ದಾರಿ ಮಾರ್ಗದಲ್ಲಿ ಸಾಗಲಿದೆ.

ಈ‌ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ವಾಹನ ಸಂಚಾರ ಮಾರ್ಗವನ್ನು ಬದಲಾಯಿಸಿದೆ.

ಈ ಪಾದಯಾತ್ರೆಯು ಬೆಂಗಳೂರು ನಗರ ತಲುಪುವವರೆಗೂ ಮೈಸೂರು, ಚಾಮರಾಜನಗರ, ಮಡಿಕೇರಿ ಕಡೆಯಿಂದ ಬೆಂಗಳೂರು ಕಡೆಗೆ, ಬೆಂಗಳೂರು ಕಡೆಯಿಂದ ಮೈಸೂರು, ಚಾಮರಾಜನಗರ, ಮಡಿಕೇರಿ ಕಡೆಗೆ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸಲಿರುವ ಎಲ್ಲಾ ಮಾದರಿಯ ವಾಹನಗಳ ಸವಾರರು ರಾಷ್ಟ್ರೀಯ ಹೆದ್ದಾರಿಯ ಮುಖಾಂತರ ಸಂಚರಿಸುವುದನ್ನು‌‌ ನಿರ್ಬಂಧಿಸಲಾಗಿದೆ.

ಇದಕ್ಕೆ ಪರ್ಯಾಯವಾಗಿ ಮೈಸೂರು-ಬನ್ನೂರು ಕಿರುಗಾವಲು- ಮಳವಳ್ಳಿ- ಹಲಗೂರು- ಸಾತನೂರು-ಕನಕಪುರ -ಹಾರೋಹಳ್ಳಿ -ಕಗ್ಗಲೀಪುರ- ಬನಶಂಕರಿ- ಸಾರಕ್ಕಿ ಮಾರ್ಗವಾಗಿ ಸಂಚರಿಸಬಹುದು. ಅಥವಾ ಮೈಸೂರು- ಶ್ರೀರಂಗಪಟ್ಟಣ- ಪಾಂಡವಪುರ- ನಾಗಮಂಗಲ- ಬೆಳ್ಳೂರುಕ್ರಾಸ್- ಕುಣಿಗಲ್ ನೆಲಮಂಗಲ ಮಾರ್ಗವಾಗಿ ಸಂಚರಿಸಬಹುದಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇವನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT