ಕೆಪಿಸಿಸಿ ಕಾನೂನು ಘಟಕದ ಕಾರ್ಯದರ್ಶಿ ಸೂರ್ಯ ಮುಕುಂದರಾಜು ಮಾತನಾಡಿ, ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ವಿವಿಧ ವಿಶ್ವವಿದ್ಯಾಲಯಗಳಿಗೆ ನೇಮಕಗೊಂಡಿದ್ದ ಸಿಂಡಿಕೇಟ್ ಸದಸ್ಯರ ಸದಸ್ಯತ್ವವನ್ನು ಈಗಿನ ಸರ್ಕಾರ ರದ್ದು ಮಾಡಿ ಹೊಸಬರನ್ನು ನೇಮಕ ಮಾಡಿದೆ. ವಿಶ್ವವಿದ್ಯಾಲಯದ ನಿಯಮಾವಳಿ ಪ್ರಕಾರ ಒಮ್ಮೆ ವಿ.ವಿ.ಗೆ ಸಿಂಡಿಕೇಟ್ ಸದಸ್ಯರ ನೇಮಕವಾದ ನಂತರ ಅವಧಿ ಮುಗಿಯುವ ತನಕ ಮತ್ತೊಬ್ಬರನ್ನು ನೇಮಿಸುವಂತೆ ಇಲ್ಲ. ಆದರೆ ನಿಯಮವನ್ನು ಗಾಳಿಗೆ ತೂರಿ ಮೈಸೂರು ವಿ.ವಿ.ಗೆ ಸಿ.ಎಂ. ಸುರೇಶ್ರನ್ನು ನೇಮಕ ಮಾಡಲಾಗಿದೆ ಎಂದು ದೂರಿದರು.