<p><strong>ಕನಕಪುರ:</strong> ಮತಗಳ್ಳತನ ವಿರೋಧಿಸಿ, ಪ್ರಜಾಪ್ರಭುತ್ವ ಉಳಿಸಿ ಅಭಿಯಾನದ ಸಹಿ ಸಂಗ್ರಹ ಅಭಿಯಾನವನ್ನು ತಾಲ್ಲೂಕಿನ ಕೋಡಿಹಳ್ಳಿ ಗ್ರಾಮದಲ್ಲಿ ಸಾತನೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ಶುಕ್ರವಾರ ಹಮ್ಮಿಕೊಳ್ಳಲಾಯಿತು. </p>.<p>ಸಾತನೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಾತನೂರು ನಾಗರಾಜು ಸಹಿ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು. </p>.<p>‘ಬಿಜೆಪಿ ಪಕ್ಷವು ರಾಜ್ಯದಲ್ಲೂ ಮತಗಳ್ಳತನ ಮಾಡಿದೆ. ತಾನು ಸೋಲುವ ಭೀತಿ ಇರುವ ಕ್ಷೇತ್ರಗಳಲ್ಲಿ ತಮಗೆ ಬೇಕಾದ ಮತದಾರರನ್ನು ಸೇರಿಸಿ, ತಮ್ಮ ಪಕ್ಷಕ್ಕೆ ಮತ ಬಾರದವರ ಹೆಸರನ್ನು ಮತದಾರರ ಪಟ್ಟಿಯಿಂದ ತೆಗೆದು ಹಾಕಿಸಿದೆ’ ಎಂದು ಆರೋಪಿಸಿದರು. </p>.<p>ಮಹದೇವಪುರ ಕ್ಷೇತ್ರ ಒಂದರಲ್ಲಿ ಒಂದೂವರೆ ಲಕ್ಷಕ್ಕೂ ಹೆಚ್ಚಿನ ಮತದಾರರನ್ನು ಸೇರಿಸಿರುವುದು ದೃಢಪಟ್ಟಿದೆ. ಇದರಿಂದ ಚುನಾವಣಾ ಆಯೋಗವು ಮತಗಳ್ಳತನಕ್ಕೆ ಅವಕಾಶ ನೀಡಿರುವುದು ಗೊತ್ತಾಗುತ್ತದೆ ಎಂದರು. </p>.<p>ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಂ.ಡಿ.ವಿಜಯದೇವ ಮಾತನಾಡಿ, ರಾಜ್ಯ ಮತ್ತು ರಾಷ್ಟ್ರದಲ್ಲಿ ಬಿಜೆಪಿ ಚುನಾವಣಾ ಆಯೋಗದೊಂದಿಗೆ ಶಾಮೀಲಾಗಿ ಮತಗಳ್ಳತನ ಮಾಡಿ ಅಕ್ರಮವಾಗಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದಿದೆ. ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ ಸೇರಿದಂತೆ ರಾಜ್ಯದ ಹಲವು ಕ್ಷೇತ್ರಗಳಲ್ಲಿ ಮತಗಳ್ಳತನ ಆಗಿರುವ ಅನುಮಾನವಿದೆ. ಈ ಬಗ್ಗೆ ತನಿಖೆ ಆಗಬೇಕು ಎಂದು ಒತ್ತಾಯಿಸಿದರು. </p>.<p>‘ಮತಗಳ್ಳತನದ ವಿರುದ್ಧ ನಮ್ಮ ನಾಯಕ ರಾಹುಲ್ ಗಾಂಧಿ ಹೋರಾಟ ನಡೆಸುತ್ತಿದ್ದು, ನಮ್ಮ ರಾಜ್ಯದಲ್ಲೂ ಮತಗಳ್ಳತನದ ವಿರುದ್ಧ ಹಾಗೂ ಸಂವಿಧಾನವನ್ನು ಉಳಿಸುವಂತೆ ಒತ್ತಾಯಿಸಿ, ಸಹಿ ಸಂಗ್ರಹ ಅಭಿಯಾನ ನಡೆಸುತ್ತಿದ್ದೇವೆ’ ಎಂದರು.</p>.<p>ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಬಸಪ್ಪ, ಕೆ.ಎಂ.ರಾಜೇಂದ್ರ, ಮುನಿ ಹುಚ್ಚೇಗೌಡ, ಶ್ರೀನಿವಾಸ್, ರಮೇಶ್, ರುದ್ರೇಶ್ ಅರಕೆರೆ, ಮಾದೇಶ್, ಸೋಮಶೇಖರ್, ಮಲ್ಲೇಶ್, ಅಶೋಕ್, ಜಮೀರ್, ರೂಪ, ಉಷಾ, ಅಭಿಷೇಕ್, ಸಾಗರ್, ಕಿರಣ್, ಅಪ್ಪಿ, ಸಾಕಿಬ್ ಪಾಷಾ ಸಹಿ ಸಂಗ್ರಹ ಅಭಿಯಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕನಕಪುರ:</strong> ಮತಗಳ್ಳತನ ವಿರೋಧಿಸಿ, ಪ್ರಜಾಪ್ರಭುತ್ವ ಉಳಿಸಿ ಅಭಿಯಾನದ ಸಹಿ ಸಂಗ್ರಹ ಅಭಿಯಾನವನ್ನು ತಾಲ್ಲೂಕಿನ ಕೋಡಿಹಳ್ಳಿ ಗ್ರಾಮದಲ್ಲಿ ಸಾತನೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ಶುಕ್ರವಾರ ಹಮ್ಮಿಕೊಳ್ಳಲಾಯಿತು. </p>.<p>ಸಾತನೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಾತನೂರು ನಾಗರಾಜು ಸಹಿ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು. </p>.<p>‘ಬಿಜೆಪಿ ಪಕ್ಷವು ರಾಜ್ಯದಲ್ಲೂ ಮತಗಳ್ಳತನ ಮಾಡಿದೆ. ತಾನು ಸೋಲುವ ಭೀತಿ ಇರುವ ಕ್ಷೇತ್ರಗಳಲ್ಲಿ ತಮಗೆ ಬೇಕಾದ ಮತದಾರರನ್ನು ಸೇರಿಸಿ, ತಮ್ಮ ಪಕ್ಷಕ್ಕೆ ಮತ ಬಾರದವರ ಹೆಸರನ್ನು ಮತದಾರರ ಪಟ್ಟಿಯಿಂದ ತೆಗೆದು ಹಾಕಿಸಿದೆ’ ಎಂದು ಆರೋಪಿಸಿದರು. </p>.<p>ಮಹದೇವಪುರ ಕ್ಷೇತ್ರ ಒಂದರಲ್ಲಿ ಒಂದೂವರೆ ಲಕ್ಷಕ್ಕೂ ಹೆಚ್ಚಿನ ಮತದಾರರನ್ನು ಸೇರಿಸಿರುವುದು ದೃಢಪಟ್ಟಿದೆ. ಇದರಿಂದ ಚುನಾವಣಾ ಆಯೋಗವು ಮತಗಳ್ಳತನಕ್ಕೆ ಅವಕಾಶ ನೀಡಿರುವುದು ಗೊತ್ತಾಗುತ್ತದೆ ಎಂದರು. </p>.<p>ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಂ.ಡಿ.ವಿಜಯದೇವ ಮಾತನಾಡಿ, ರಾಜ್ಯ ಮತ್ತು ರಾಷ್ಟ್ರದಲ್ಲಿ ಬಿಜೆಪಿ ಚುನಾವಣಾ ಆಯೋಗದೊಂದಿಗೆ ಶಾಮೀಲಾಗಿ ಮತಗಳ್ಳತನ ಮಾಡಿ ಅಕ್ರಮವಾಗಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದಿದೆ. ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ ಸೇರಿದಂತೆ ರಾಜ್ಯದ ಹಲವು ಕ್ಷೇತ್ರಗಳಲ್ಲಿ ಮತಗಳ್ಳತನ ಆಗಿರುವ ಅನುಮಾನವಿದೆ. ಈ ಬಗ್ಗೆ ತನಿಖೆ ಆಗಬೇಕು ಎಂದು ಒತ್ತಾಯಿಸಿದರು. </p>.<p>‘ಮತಗಳ್ಳತನದ ವಿರುದ್ಧ ನಮ್ಮ ನಾಯಕ ರಾಹುಲ್ ಗಾಂಧಿ ಹೋರಾಟ ನಡೆಸುತ್ತಿದ್ದು, ನಮ್ಮ ರಾಜ್ಯದಲ್ಲೂ ಮತಗಳ್ಳತನದ ವಿರುದ್ಧ ಹಾಗೂ ಸಂವಿಧಾನವನ್ನು ಉಳಿಸುವಂತೆ ಒತ್ತಾಯಿಸಿ, ಸಹಿ ಸಂಗ್ರಹ ಅಭಿಯಾನ ನಡೆಸುತ್ತಿದ್ದೇವೆ’ ಎಂದರು.</p>.<p>ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಬಸಪ್ಪ, ಕೆ.ಎಂ.ರಾಜೇಂದ್ರ, ಮುನಿ ಹುಚ್ಚೇಗೌಡ, ಶ್ರೀನಿವಾಸ್, ರಮೇಶ್, ರುದ್ರೇಶ್ ಅರಕೆರೆ, ಮಾದೇಶ್, ಸೋಮಶೇಖರ್, ಮಲ್ಲೇಶ್, ಅಶೋಕ್, ಜಮೀರ್, ರೂಪ, ಉಷಾ, ಅಭಿಷೇಕ್, ಸಾಗರ್, ಕಿರಣ್, ಅಪ್ಪಿ, ಸಾಕಿಬ್ ಪಾಷಾ ಸಹಿ ಸಂಗ್ರಹ ಅಭಿಯಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>