<p><strong>ರಾಮನಗರ: </strong>ವಿಧಾನ ಪರಿಷತ್ ಸದಸ್ಯ ಸಿ.ಪಿ. ಯೋಗೇಶ್ವರ್ ಬಿಜೆಪಿಯಿಂದ ಅಂತರ ಕಾಯ್ದುಕೊಳ್ಳುತ್ತಿರುವ ಬೆನ್ನಲ್ಲೇ ಅವರನ್ನು ಮತ್ತೆ ಕಾಂಗ್ರೆಸ್ನತ್ತ ಸೆಳೆಯಲು ಕೈ ನಾಯಕರು ಪ್ರಯತ್ನ ನಡೆಸಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.</p>.<p>ಸದ್ಯ ಸಚಿವ ಸ್ಥಾನ ವಂಚಿತರಾಗಿರುವ ಯೋಗೇಶ್ವರ್ ಅದಕ್ಕಾಗಿ ಪ್ರಯತ್ನ ಮುಂದುವರಿಸುತ್ತಲೇ ಇದ್ದಾರೆ. ಮತ್ತೊಂದೆಡೆ, ಕಾಂಗ್ರೆಸ್ ನಾಯಕರ ಜೊತೆ ಸಂಪರ್ಕ ಬೆಳೆಸುವ ಮೂಲಕ ಬಿಜೆಪಿ ಹೈಕಮಾಂಡ್ಗೆ ಸಂದೇಶ ರವಾನಿಸಿದ್ದಾರೆ. ಸಿಪಿವೈ–ಡಿ.ಕೆ. ಸುರೇಶ್ ನಡುವೆ ಮಾತುಕತೆಯೂ ನಡೆದಿದೆ ಎಂದು ಸುದ್ದಿ ಹಬ್ಬಿದೆ. ಆದರೆ ಈ ಬಗ್ಗೆ ಪ್ರತಿಕ್ರಿಯೆ ಪಡೆಯಲು ಈ ಇಬ್ಬರು ನಾಯಕರು ದೂರವಾಣಿ ಸಂಪರ್ಕಕ್ಕೆ ಲಭ್ಯರಾಗಲಿಲ್ಲ.</p>.<p><strong>ಡಿಕೆಶಿ ತಂತ್ರ: </strong>ವರ್ಷಗಳ ಹಿಂದಷ್ಟೇ ‘ದೋಸ್ತಿ’ ಆಗಿದ್ದ ಎಚ್.ಡಿ. ಕುಮಾರಸ್ವಾಮಿ ಅವರನ್ನು ಚನ್ನಪಟ್ಟಣ ಕ್ಷೇತ್ರದಲ್ಲೇ ಕಟ್ಟಿಹಾಕಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಯೋಜಿಸಿದ್ದಾರೆ. ಅದಕ್ಕಾಗಿ ತಮ್ಮ ರಾಜಕೀಯ ವೈರಿ ಯೋಗೇಶ್ವರ್ರನ್ನು ಮತ್ತೆ ಕಾಂಗ್ರೆಸ್ಗೆ ತರುವ ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ.</p>.<p>ಚನ್ನಪಟ್ಟಣದಲ್ಲಿ ಕಾಂಗ್ರೆಸ್ಗೆ ಸಮರ್ಥ ನಾಯಕರು ಇಲ್ಲ. ಮುಂದಿನ ಚುನಾವಣೆಯಲ್ಲಿ ಕುಮಾರಸ್ವಾಮಿ–ಯೋಗೇಶ್ವರ್ ನಡುವೆ ಯಾರನ್ನೇ ಅಭ್ಯರ್ಥಿಯನ್ನಾಗಿ ಹಾಕಿದರೂ ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟು ಕೊಳ್ಳಬೇಕಾಗಬಹುದು. ಹೀಗಾಗಿ ಯೋಗೇಶ್ವರ್ನ ಮುಂದಿನ ನಡೆ ಗಮನಿಸಿ ಅವರನ್ನು ಮತ್ತೆ ಪಕ್ಷಕ್ಕೆ ಕರೆತರಲು ತೆರೆಮರೆಯ ಸಿದ್ಧತೆ ನಡೆಸಿದ್ದಾರೆ.</p>.<p>ದೀಪಾವಳಿ ಬಳಿಕ ಕಾಂಗ್ರೆಸ್ನ ಸ್ಥಳೀಯ ನಾಯಕರ ಗುಂಪು ಚನ್ನಪಟ್ಟಣದಾದ್ಯಂತ ಪ್ರವಾಸ ಕೈಗೊಂಡು ಕಾರ್ಯಕರ್ತರ ಅಭಿಪ್ರಾಯ ಪಡೆಯಲಿದೆ. ನಂತರ ಈ ಕುರಿತು ಕೆಪಿಸಿಸಿಗೆ ವರದಿ ಸಲ್ಲಿಸಲಿದೆ. ಆ ವರದಿ ಆಧರಿಸಿ ಶಿವಕುಮಾರ್ ಮುಂದಿನ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ಕಾಂಗ್ರೆಸ್ನ ವಿಶ್ವಾಸನೀಯ ಮೂಲಗಳು ತಿಳಿಸಿವೆ.</p>.<p>ಇತ್ತ ಯೋಗೇಶ್ವರ್ ಸಹ ಇದೇ ಆಲೋಚನೆಯಲ್ಲಿದ್ದಾರೆ. ಒಂದೊಮ್ಮೆ ಆಹ್ವಾನ ಬಂದರೆ ಷರತ್ತುಗಳೊಂದಿಗೆ ಕಾಂಗ್ರೆಸ್ ಸೇರ್ಪಡೆ ಆಗುವ ಸಾಧ್ಯತೆ ತಳ್ಳಿಹಾಕುವಂತೆ ಇಲ್ಲ ಎಂದು ಅವರ ಬೆಂಬಲಿಗರು ಹೇಳುತ್ತಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಮನಗರ: </strong>ವಿಧಾನ ಪರಿಷತ್ ಸದಸ್ಯ ಸಿ.ಪಿ. ಯೋಗೇಶ್ವರ್ ಬಿಜೆಪಿಯಿಂದ ಅಂತರ ಕಾಯ್ದುಕೊಳ್ಳುತ್ತಿರುವ ಬೆನ್ನಲ್ಲೇ ಅವರನ್ನು ಮತ್ತೆ ಕಾಂಗ್ರೆಸ್ನತ್ತ ಸೆಳೆಯಲು ಕೈ ನಾಯಕರು ಪ್ರಯತ್ನ ನಡೆಸಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.</p>.<p>ಸದ್ಯ ಸಚಿವ ಸ್ಥಾನ ವಂಚಿತರಾಗಿರುವ ಯೋಗೇಶ್ವರ್ ಅದಕ್ಕಾಗಿ ಪ್ರಯತ್ನ ಮುಂದುವರಿಸುತ್ತಲೇ ಇದ್ದಾರೆ. ಮತ್ತೊಂದೆಡೆ, ಕಾಂಗ್ರೆಸ್ ನಾಯಕರ ಜೊತೆ ಸಂಪರ್ಕ ಬೆಳೆಸುವ ಮೂಲಕ ಬಿಜೆಪಿ ಹೈಕಮಾಂಡ್ಗೆ ಸಂದೇಶ ರವಾನಿಸಿದ್ದಾರೆ. ಸಿಪಿವೈ–ಡಿ.ಕೆ. ಸುರೇಶ್ ನಡುವೆ ಮಾತುಕತೆಯೂ ನಡೆದಿದೆ ಎಂದು ಸುದ್ದಿ ಹಬ್ಬಿದೆ. ಆದರೆ ಈ ಬಗ್ಗೆ ಪ್ರತಿಕ್ರಿಯೆ ಪಡೆಯಲು ಈ ಇಬ್ಬರು ನಾಯಕರು ದೂರವಾಣಿ ಸಂಪರ್ಕಕ್ಕೆ ಲಭ್ಯರಾಗಲಿಲ್ಲ.</p>.<p><strong>ಡಿಕೆಶಿ ತಂತ್ರ: </strong>ವರ್ಷಗಳ ಹಿಂದಷ್ಟೇ ‘ದೋಸ್ತಿ’ ಆಗಿದ್ದ ಎಚ್.ಡಿ. ಕುಮಾರಸ್ವಾಮಿ ಅವರನ್ನು ಚನ್ನಪಟ್ಟಣ ಕ್ಷೇತ್ರದಲ್ಲೇ ಕಟ್ಟಿಹಾಕಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಯೋಜಿಸಿದ್ದಾರೆ. ಅದಕ್ಕಾಗಿ ತಮ್ಮ ರಾಜಕೀಯ ವೈರಿ ಯೋಗೇಶ್ವರ್ರನ್ನು ಮತ್ತೆ ಕಾಂಗ್ರೆಸ್ಗೆ ತರುವ ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ.</p>.<p>ಚನ್ನಪಟ್ಟಣದಲ್ಲಿ ಕಾಂಗ್ರೆಸ್ಗೆ ಸಮರ್ಥ ನಾಯಕರು ಇಲ್ಲ. ಮುಂದಿನ ಚುನಾವಣೆಯಲ್ಲಿ ಕುಮಾರಸ್ವಾಮಿ–ಯೋಗೇಶ್ವರ್ ನಡುವೆ ಯಾರನ್ನೇ ಅಭ್ಯರ್ಥಿಯನ್ನಾಗಿ ಹಾಕಿದರೂ ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟು ಕೊಳ್ಳಬೇಕಾಗಬಹುದು. ಹೀಗಾಗಿ ಯೋಗೇಶ್ವರ್ನ ಮುಂದಿನ ನಡೆ ಗಮನಿಸಿ ಅವರನ್ನು ಮತ್ತೆ ಪಕ್ಷಕ್ಕೆ ಕರೆತರಲು ತೆರೆಮರೆಯ ಸಿದ್ಧತೆ ನಡೆಸಿದ್ದಾರೆ.</p>.<p>ದೀಪಾವಳಿ ಬಳಿಕ ಕಾಂಗ್ರೆಸ್ನ ಸ್ಥಳೀಯ ನಾಯಕರ ಗುಂಪು ಚನ್ನಪಟ್ಟಣದಾದ್ಯಂತ ಪ್ರವಾಸ ಕೈಗೊಂಡು ಕಾರ್ಯಕರ್ತರ ಅಭಿಪ್ರಾಯ ಪಡೆಯಲಿದೆ. ನಂತರ ಈ ಕುರಿತು ಕೆಪಿಸಿಸಿಗೆ ವರದಿ ಸಲ್ಲಿಸಲಿದೆ. ಆ ವರದಿ ಆಧರಿಸಿ ಶಿವಕುಮಾರ್ ಮುಂದಿನ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ಕಾಂಗ್ರೆಸ್ನ ವಿಶ್ವಾಸನೀಯ ಮೂಲಗಳು ತಿಳಿಸಿವೆ.</p>.<p>ಇತ್ತ ಯೋಗೇಶ್ವರ್ ಸಹ ಇದೇ ಆಲೋಚನೆಯಲ್ಲಿದ್ದಾರೆ. ಒಂದೊಮ್ಮೆ ಆಹ್ವಾನ ಬಂದರೆ ಷರತ್ತುಗಳೊಂದಿಗೆ ಕಾಂಗ್ರೆಸ್ ಸೇರ್ಪಡೆ ಆಗುವ ಸಾಧ್ಯತೆ ತಳ್ಳಿಹಾಕುವಂತೆ ಇಲ್ಲ ಎಂದು ಅವರ ಬೆಂಬಲಿಗರು ಹೇಳುತ್ತಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>