<p><strong>ರಾಮನಗರ:</strong> ‘ಜಿಲ್ಲೆಯ ರಾಮನಗರ ವಿಧಾನಸಭಾ ಕ್ಷೇತ್ರದಲ್ಲಿ ನನ್ನ ಅಸ್ತಿತ್ವವನ್ನೇ ಅಲುಗಾಡಿಸಲು ಕಾಂಗ್ರೆಸ್ ಮುಖಂಡರು ಸಂಚು ರೂಪಿಸಿದ್ದು, ಇದರ ವಿರುದ್ಧ ಹೋರಾಟ ನಡೆಸುತ್ತೇನೆ’ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದರು.</p>.<p>‘ರಾಜ್ಯದಲ್ಲಿ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡ ಪರಿಣಾಮ ಜೆಡಿಎಸ್ಗೆ ಹಿನ್ನಡೆ ಆಯಿತು. ರಾಮನಗರದಲ್ಲಿ ಈ ಹಿಂದೆ ನಮ್ಮ ತಂದೆ ಮತ್ತು ನಾನು ಬಂದಾಗ ಕಾಂಗ್ರೆಸ್ನವರು ಮನೆ ಸೇರಿದ್ದರು. ಇದೀಗ ಕ್ಷೇತ್ರದಲ್ಲಿ ನನ್ನ ಅಸ್ತಿತ್ವ ಅಲುಗಾಡಿಸಲು ಹೊರಟಿದ್ದಾರೆ. ಚಿತ್ರದುರ್ಗದ ಮದಕರಿ ನಾಯಕನ ಕೋಟೆಗೆ ಹೈದರಾಲಿ ಸೈನಿಕರು ಕಿಂಡಿಯಲ್ಲಿ ನುಗ್ಗಿದಂತೆ ನನ್ನ ಕೋಟೆಗೆ ನುಗ್ಗುತ್ತಿದ್ದಾರೆ. ಆದರೆ ಈ ಬಗ್ಗೆ ಭಯವಿಲ್ಲ’ ಎಂದು ಅವರು ಸೋಮವಾರ ಪತ್ರಕರ್ತರಿಗೆ ತಿಳಿಸಿದರು.</p>.<p>‘ನಮ್ಮ ಪಕ್ಷದ ಯಾವ ಮುಖಂಡ, ಶಾಸಕರನ್ನು ಸೆಳದರೂ ಪರವಾಗಿಲ್ಲ. ಇನ್ನೂ ಎಷ್ಟೇ ಜನ ಹೋದರೂ ಜೆಡಿಎಸ್ ಬಲವಾಗಿರುತ್ತದೆ. ನನ್ನ ಪಕ್ಷದ ಸಾಮಾನ್ಯ ಕಾರ್ಯಕರ್ತರನ್ನು ಯಾರಿಂದಲೂ ಅಲುಗಾಡಿಸಲು ಸಾಧ್ಯವಿಲ್ಲ’ ಎಂದರು.</p>.<p><strong>‘ಯಾರ ಕುತ್ತಿಗೆಗೆ ಸುತ್ತಿಕೊಳ್ಳುತ್ತದೆ ನೋಡೋಣ’</strong></p>.<p>"ಸಿ.ಡಿ. ಪ್ರಕರಣ ಸಾರ್ವಜನಿಕರ ಪಾಲಿಗೆ ನಗೆಪಾಟಲಿನ ವಸ್ತುವಾಗಿದ್ದು, ಅಂತಿಮವಾಗಿ ಯಾರ ಕುತ್ತಿಗೆಗೆ ಸುತ್ತಿಹಾಕಿಕೊಳ್ಳುತ್ತದೆ ಎಂಬುದನ್ನು ನೋಡಲು ನಾನೂ ಕುತೂಹಲದಿಂದ ಇದ್ದೇನೆ’ ಎಂದು ಎಚ್.ಡಿ. ಕುಮಾರಸ್ವಾಮಿ ಹೇಳಿದರು.</p>.<p>‘ಡಿ.ಕೆ. ಶಿವಕುಮಾರ್ ಈ ಪ್ರಕರಣದಲ್ಲಿ ಯಾಕೆ ತಮ್ಮ ಹೆಸರನ್ನು ತಾವೇ ಯಾಕೆ ತೆಗೆದುಕೊಂಡರು ಎಂಬುದೇ ಯಕ್ಷ ಪ್ರಶ್ನೆ. ಇದಕ್ಕೆ ಅವರೇ ಉತ್ತರಿಸಬೇಕು’ ಎಂದು ಎಚ್ಡಿಕೆ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಮನಗರ:</strong> ‘ಜಿಲ್ಲೆಯ ರಾಮನಗರ ವಿಧಾನಸಭಾ ಕ್ಷೇತ್ರದಲ್ಲಿ ನನ್ನ ಅಸ್ತಿತ್ವವನ್ನೇ ಅಲುಗಾಡಿಸಲು ಕಾಂಗ್ರೆಸ್ ಮುಖಂಡರು ಸಂಚು ರೂಪಿಸಿದ್ದು, ಇದರ ವಿರುದ್ಧ ಹೋರಾಟ ನಡೆಸುತ್ತೇನೆ’ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದರು.</p>.<p>‘ರಾಜ್ಯದಲ್ಲಿ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡ ಪರಿಣಾಮ ಜೆಡಿಎಸ್ಗೆ ಹಿನ್ನಡೆ ಆಯಿತು. ರಾಮನಗರದಲ್ಲಿ ಈ ಹಿಂದೆ ನಮ್ಮ ತಂದೆ ಮತ್ತು ನಾನು ಬಂದಾಗ ಕಾಂಗ್ರೆಸ್ನವರು ಮನೆ ಸೇರಿದ್ದರು. ಇದೀಗ ಕ್ಷೇತ್ರದಲ್ಲಿ ನನ್ನ ಅಸ್ತಿತ್ವ ಅಲುಗಾಡಿಸಲು ಹೊರಟಿದ್ದಾರೆ. ಚಿತ್ರದುರ್ಗದ ಮದಕರಿ ನಾಯಕನ ಕೋಟೆಗೆ ಹೈದರಾಲಿ ಸೈನಿಕರು ಕಿಂಡಿಯಲ್ಲಿ ನುಗ್ಗಿದಂತೆ ನನ್ನ ಕೋಟೆಗೆ ನುಗ್ಗುತ್ತಿದ್ದಾರೆ. ಆದರೆ ಈ ಬಗ್ಗೆ ಭಯವಿಲ್ಲ’ ಎಂದು ಅವರು ಸೋಮವಾರ ಪತ್ರಕರ್ತರಿಗೆ ತಿಳಿಸಿದರು.</p>.<p>‘ನಮ್ಮ ಪಕ್ಷದ ಯಾವ ಮುಖಂಡ, ಶಾಸಕರನ್ನು ಸೆಳದರೂ ಪರವಾಗಿಲ್ಲ. ಇನ್ನೂ ಎಷ್ಟೇ ಜನ ಹೋದರೂ ಜೆಡಿಎಸ್ ಬಲವಾಗಿರುತ್ತದೆ. ನನ್ನ ಪಕ್ಷದ ಸಾಮಾನ್ಯ ಕಾರ್ಯಕರ್ತರನ್ನು ಯಾರಿಂದಲೂ ಅಲುಗಾಡಿಸಲು ಸಾಧ್ಯವಿಲ್ಲ’ ಎಂದರು.</p>.<p><strong>‘ಯಾರ ಕುತ್ತಿಗೆಗೆ ಸುತ್ತಿಕೊಳ್ಳುತ್ತದೆ ನೋಡೋಣ’</strong></p>.<p>"ಸಿ.ಡಿ. ಪ್ರಕರಣ ಸಾರ್ವಜನಿಕರ ಪಾಲಿಗೆ ನಗೆಪಾಟಲಿನ ವಸ್ತುವಾಗಿದ್ದು, ಅಂತಿಮವಾಗಿ ಯಾರ ಕುತ್ತಿಗೆಗೆ ಸುತ್ತಿಹಾಕಿಕೊಳ್ಳುತ್ತದೆ ಎಂಬುದನ್ನು ನೋಡಲು ನಾನೂ ಕುತೂಹಲದಿಂದ ಇದ್ದೇನೆ’ ಎಂದು ಎಚ್.ಡಿ. ಕುಮಾರಸ್ವಾಮಿ ಹೇಳಿದರು.</p>.<p>‘ಡಿ.ಕೆ. ಶಿವಕುಮಾರ್ ಈ ಪ್ರಕರಣದಲ್ಲಿ ಯಾಕೆ ತಮ್ಮ ಹೆಸರನ್ನು ತಾವೇ ಯಾಕೆ ತೆಗೆದುಕೊಂಡರು ಎಂಬುದೇ ಯಕ್ಷ ಪ್ರಶ್ನೆ. ಇದಕ್ಕೆ ಅವರೇ ಉತ್ತರಿಸಬೇಕು’ ಎಂದು ಎಚ್ಡಿಕೆ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>