ಜಿಲ್ಲೆಯ ಪ್ರಭಾವಿ ರಾಜಕಾರಣಿಯಾಗಿರುವ ಡಿ.ಕೆ. ಶಿವಕುಮಾರ್ ಕಳೆದ ಕೆಲವು ವಾರಗಳಿಂದಲೂ ಇ.ಡಿ. ಅಧಿಕಾರಿಗಳ ವಶದಲ್ಲಿಯೇ ಇದ್ದಾರೆ. ಅವರ ಸಹೋದರ, ಡಿ.ಕೆ. ಸುರೇಶ್ ಸಹ ದೆಹಲಿಯಲ್ಲಿ ಬೀಡುಬಿಟ್ಟಿದ್ದು, ಅಣ್ಣನ ಬಿಡುಗಡೆಗೆ ಪ್ರಯತ್ನಿಸುತ್ತಿದ್ದಾರೆ. ಇತ್ತ ಜಿಲ್ಲೆಯ ಸಾಕಷ್ಟು ಕಾಂಗ್ರೆಸ್ ಕಾರ್ಯಕರ್ತರೂ ದೆಹಲಿಗೆ ದೌಡಾಯಿಸುತ್ತಿದ್ದು, ಅವರನ್ನು ನಿಯಂತ್ರಿಸುವುದು ಸ್ವತಃ ಸುರೇಶ್ಗೆ ತಲೆನೋವಾಗಿ ಪರಿಣಮಿಸಿದೆ.