ಮತ್ತೊಂದು ಪ್ರಕರಣದಲ್ಲಿ ನಗರದ ಕೆಇಬಿ ಸರ್ಕಲ್ ಬಳಿ ಪರಿಶೀಲಿಸಿದ ಮಾರುತಿ ಸ್ವಿಫ್ಟ್ ಕಾರಿನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ₹ 7.50 ಲಕ್ಷ ನಗದನ್ನು ನಗರದ ಪಿಎಸ್ಐ ರಾಜು ನೇತೃತ್ವದಲ್ಲಿ ವಶಕ್ಕೆ ಪಡೆಯಲಾಗಿದೆ. ಆರೋಪಿಗಳಾದ ಗೋವಿಂದರಾಜು ಮತ್ತು ವೇಣುಗೋಪಾಲ್ ದೇವನಹಳ್ಳಿ ತಾಲ್ಲೂಕಿನವರಾಗಿದ್ದು ಹಣಕ್ಕೆ ದಾಖಲೆಯಿಲ್ಲದ ಕಾರಣ ಹಣವನ್ನು ವಶಕ್ಕೆ ಪಡೆದು ದೂರು ದಾಖಲಿಸಲಾಗಿದೆ.