ಎಲ್ಲರೂ ಸ್ವ ಉದ್ಯೋಗವನ್ನು ಕೈಗೊಳ್ಳಬೇಕು. ಸ್ವಾವಲಂಬಿ ಭಾರತ ನಿರ್ಮಾಣ ಮಾಡಬೇಕು. ಆರೋಗ್ಯಕರ ಆಹಾರ ಪದ್ಧತಿಯನ್ನು ಅನುಸರಿಸಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಬೇಕು. ತಾಜಾ, ಬಿಸಿಯಾದ, ಜೀರ್ಣಕ್ಕೆ ಸುಲಭವಾದ ಲಭ್ಯವಿರುವ ತರಕಾರಿಗಳನ್ನು ಸೇವಿಸುವುದು ಒಳಿತು. ಅಂತರ ಕಾಪಾಡಿಕೊಳ್ಳುವ ನಿಯಮವನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕು ಎಂದು ಸಲಹೆ ನೀಡಿದರು.