<p><strong>ರಾಮನಗರ: </strong>‘ಸರ್ಕಾರದ ನಿಗಮ– ಮಂಡಳಿಗಳು ಆಯಾ ಸಮುದಾಯಗಳ ಸುಧಾರಣಾ ಕೇಂದ್ರಗಳಾಗಬೇಕೆ ಹೊರತು, ಸುಲಿಗೆ ಕೇಂದ್ರಗಳಾಗಬಾರದು. ಸಮುದಾಯಗಳನ್ನು ಆರ್ಥಿಕವಾಗಿ, ಶೈಕ್ಷಣಿಕವಾಗಿ ಹಾಗೂ ಸಾಮಾಜಿಕವಾಗಿ ಮೇಲಕ್ಕೆತ್ತುವ ಉದ್ದೇಶದಿಂದ ಈ ನಿಗಮಗಳು ಸ್ಥಾಪನೆಯಾಗಿವೆ ಎಂಬುದನ್ನು ಮರೆಯಬಾರದು’ ಎಂದು ಭೋವಿ ಗುರುಪೀಠದ ಪೀಠಾಧ್ಯಕ್ಷ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಅಭಿಪ್ರಾಯಪಟ್ಟರು.</p>.<p>‘ಸಮುದಾಯಗಳ ಅನುಕೂಲಕ್ಕಾಗಿ ಸ್ಥಾಪನೆಯಾಗಿರುವ ನಿಗಮಗಳು ಹಾಗೂ ಮಂಡಳಿಗಳಲ್ಲಿ ಹಣವು ದುರುಪಯೋಗವಾಗದಂತೆ ರಾಜ್ಯ ಸರ್ಕಾರ ಕಠಿಣ ಕಾನೂನು ಜಾರಿಗೆ ತರಬೇಕು. ಇಲ್ಲದಿದ್ದರೆ, ವಾಲ್ಮೀಕಿ ನಿಗಮದಲ್ಲಾದಂತೆ ಹಣವು ದುರುಪಯೋಗವಾಗುತ್ತದೆ. ಇದರಿಂದ ಸಮುದಾಯಕ್ಕೆ ಅನ್ಯಾಯ ಮಾಡಿದಂತಾಗುತ್ತದೆ’ ಎಂದು ನಗರದಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಮನಗರ: </strong>‘ಸರ್ಕಾರದ ನಿಗಮ– ಮಂಡಳಿಗಳು ಆಯಾ ಸಮುದಾಯಗಳ ಸುಧಾರಣಾ ಕೇಂದ್ರಗಳಾಗಬೇಕೆ ಹೊರತು, ಸುಲಿಗೆ ಕೇಂದ್ರಗಳಾಗಬಾರದು. ಸಮುದಾಯಗಳನ್ನು ಆರ್ಥಿಕವಾಗಿ, ಶೈಕ್ಷಣಿಕವಾಗಿ ಹಾಗೂ ಸಾಮಾಜಿಕವಾಗಿ ಮೇಲಕ್ಕೆತ್ತುವ ಉದ್ದೇಶದಿಂದ ಈ ನಿಗಮಗಳು ಸ್ಥಾಪನೆಯಾಗಿವೆ ಎಂಬುದನ್ನು ಮರೆಯಬಾರದು’ ಎಂದು ಭೋವಿ ಗುರುಪೀಠದ ಪೀಠಾಧ್ಯಕ್ಷ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಅಭಿಪ್ರಾಯಪಟ್ಟರು.</p>.<p>‘ಸಮುದಾಯಗಳ ಅನುಕೂಲಕ್ಕಾಗಿ ಸ್ಥಾಪನೆಯಾಗಿರುವ ನಿಗಮಗಳು ಹಾಗೂ ಮಂಡಳಿಗಳಲ್ಲಿ ಹಣವು ದುರುಪಯೋಗವಾಗದಂತೆ ರಾಜ್ಯ ಸರ್ಕಾರ ಕಠಿಣ ಕಾನೂನು ಜಾರಿಗೆ ತರಬೇಕು. ಇಲ್ಲದಿದ್ದರೆ, ವಾಲ್ಮೀಕಿ ನಿಗಮದಲ್ಲಾದಂತೆ ಹಣವು ದುರುಪಯೋಗವಾಗುತ್ತದೆ. ಇದರಿಂದ ಸಮುದಾಯಕ್ಕೆ ಅನ್ಯಾಯ ಮಾಡಿದಂತಾಗುತ್ತದೆ’ ಎಂದು ನಗರದಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>