<p><strong>ಕುದೂರು:</strong> ‘ಇಲ್ಲಿನ ಗ್ರಾಮ ಪಂಚಾಯಿತಿಯಲ್ಲಿ ಈ ಹಿಂದೆ ಕಾರ್ಯನಿರ್ವಹಿಸುತ್ತಿದ್ದ ಪಿಡಿಒ ಲೋಕೇಶ್, ತಮ್ಮ ಅಧಿಕಾರ ದುರ್ಬಳಕೆ ಮಾಡಿಕೊಂಡು ಮಧ್ಯವರ್ತಿಗಳ ಮೂಲಕ ಜನರಿಂದ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚಿಸಿದ್ದಾರೆ’ ಎಂದು ಗ್ರಾಮ ಪಂಚಾಯಿತಿ ಸದಸ್ಯ ಕೆ.ಬಿ.ಬಾಲರಾಜು ದೂರಿದರು.</p>.<p>ಗ್ರಾಮ ಪಂಚಾಯಿತಿ ಆವರಣದಲ್ಲಿ ಈಚೆಗೆ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಪಿಡಿಒ ಲೋಕೇಶ್ ಗ್ರಾ.ಪಂ. ಹಾಗೂ ಇಲಾಖೆಯ ಹೆಸರಿನಲ್ಲಿ ರಸೀದಿಗಳನ್ನು ಸಿದ್ಧಪಡಿಸಿ, ಗ್ರಾಮದ 7ನೇ ವಾರ್ಡಿನ ದಿನೇಶ್ ಎಂಬುವರಿಂದ ₹ 1 ಲಕ್ಷ ವಸೂಲಿ ಮಾಡಿ, ನಂತರ ಆ ರಸೀದಿಗಳನ್ನು ಕಂಪ್ಯೂಟರ್ನಲ್ಲಿ ಡಿಲಿಟ್ ಮಾಡಿ, ಅದನ್ನು ಗ್ರಾಮ ಪಂಚಾಯಿತಿ ಖಾತೆಗೆ ಜಮಾವಣೆ ಮಾಡದೆ ವಂಚಿಸಿದ್ದಾರೆ. ಈ ಸಂಬಂಧ ಕುದೂರು ಗ್ರಾಮ ಪಂಚಾಯಿತಿಯ ಎಲ್ಲಾ ಸದಸ್ಯರು ಸೇರಿ, ಆತನ ವಿರುದ್ಧ ಕುದೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಿದ್ದೇವೆ’ ಎಂದು ತಿಳಿಸಿದರು.</p>.<p>ಮುಖಂಡ ಹೊನ್ನರಾಜು ಮಾತನಾಡಿ, ‘ಭ್ರಷ್ಟ ಅಧಿಕಾರಿಯೊಬ್ಬ ಗ್ರಾಮ ಪಂಚಾಯಿತಿಯ 24 ಸದಸ್ಯರ ಗಮನಕ್ಕೆ ಬಾರದಂತೆ ಸಾರ್ವಜನಿಕರಿಂದ ಲಕ್ಷಾಂತರ ರೂಪಾಯಿ ಹಣ ವಸೂಲಿ ಮಾಡಿದ್ದು, ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಈತನ ವಿರುದ್ಧ ತನಿಖೆ ನಡೆಸಿ ಶಿಸ್ತು ಕ್ರಮ ಜರುಗಿಸಬೇಕು’ ಎಂದು ಒತ್ತಾಯಿಸಿದರು.</p>.<p>‘ಪಿಡಿಒ ಲೋಕೇಶ್ ಲಕ್ಷಾಂತರ ರೂಪಾಯಿ ಅವ್ಯವಹಾರ ನಡೆಸಿರುವ ಅನುಮಾನ ಇದೆ. ಇಲಾಖೆಯ ಹಿರಿಯ ಅಧಿಕಾರಿಗಳು ಈ ಕುರಿತು ಸೂಕ್ತ ತನಿಖೆ ಮಾಡಬೇಕು’ ಎಂದು ಮುಖಂಡ ಕೃಷ್ಣಮೂರ್ತಿ ಆಗ್ರಹಿಸಿದರೆ; ‘ಪಂಚಾಯಿತಿ ಸದಸ್ಯರಿಗೆ ಅನುಮಾನ ಬಾರದ ರೀತಿ ಚಾಣಾಕ್ಷತನದಿಂದ ಅಕ್ರಮ ಎಸಗಿದ್ದಾನೆ’ ಎಂದು ಗ್ರಾ.ಪಂ ಸದಸ್ಯ ಕೆ.ಟಿ.ವೆಂಕಟೇಶ್ ದೂರಿದರು.</p>.<p>‘ಸದಸ್ಯ ಬಾಲರಾಜು ಅವ್ಯವಹಾರಗಳಾಗದಂತೆ ನಿಗಾ ವಹಿಸುತ್ತಾರೆ ಎಂದು ಅವರನ್ನು ಉಪಾಧ್ಯಕ್ಷರನ್ನಾಗಿ ಮಾಡಿದ್ದೆವು. ಅವರು ಅವ್ಯವಹಾರ ತಡೆಯುವಲ್ಲಿ ವಿಫಲರಾಗಿದ್ದಾರೆ. ವರ್ಗಾವಣೆ ಆಗಿದ್ದ ಪಿಡಿಒನನ್ನು ಮತ್ತೆ ಕುದೂರು ಗ್ರಾ.ಪಂ.ಗೆ ಕರೆ ತಂದು ತಪ್ಪು ಮಾಡಿದ್ದು ಮಾಜಿ ಶಾಸಕ ಮಂಜುನಾಥ್’ ಎಂದು ಶಾಸಕ ಎಚ್.ಸಿ.ಬಾಲಕೃಷ್ಣ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುದೂರು:</strong> ‘ಇಲ್ಲಿನ ಗ್ರಾಮ ಪಂಚಾಯಿತಿಯಲ್ಲಿ ಈ ಹಿಂದೆ ಕಾರ್ಯನಿರ್ವಹಿಸುತ್ತಿದ್ದ ಪಿಡಿಒ ಲೋಕೇಶ್, ತಮ್ಮ ಅಧಿಕಾರ ದುರ್ಬಳಕೆ ಮಾಡಿಕೊಂಡು ಮಧ್ಯವರ್ತಿಗಳ ಮೂಲಕ ಜನರಿಂದ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚಿಸಿದ್ದಾರೆ’ ಎಂದು ಗ್ರಾಮ ಪಂಚಾಯಿತಿ ಸದಸ್ಯ ಕೆ.ಬಿ.ಬಾಲರಾಜು ದೂರಿದರು.</p>.<p>ಗ್ರಾಮ ಪಂಚಾಯಿತಿ ಆವರಣದಲ್ಲಿ ಈಚೆಗೆ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಪಿಡಿಒ ಲೋಕೇಶ್ ಗ್ರಾ.ಪಂ. ಹಾಗೂ ಇಲಾಖೆಯ ಹೆಸರಿನಲ್ಲಿ ರಸೀದಿಗಳನ್ನು ಸಿದ್ಧಪಡಿಸಿ, ಗ್ರಾಮದ 7ನೇ ವಾರ್ಡಿನ ದಿನೇಶ್ ಎಂಬುವರಿಂದ ₹ 1 ಲಕ್ಷ ವಸೂಲಿ ಮಾಡಿ, ನಂತರ ಆ ರಸೀದಿಗಳನ್ನು ಕಂಪ್ಯೂಟರ್ನಲ್ಲಿ ಡಿಲಿಟ್ ಮಾಡಿ, ಅದನ್ನು ಗ್ರಾಮ ಪಂಚಾಯಿತಿ ಖಾತೆಗೆ ಜಮಾವಣೆ ಮಾಡದೆ ವಂಚಿಸಿದ್ದಾರೆ. ಈ ಸಂಬಂಧ ಕುದೂರು ಗ್ರಾಮ ಪಂಚಾಯಿತಿಯ ಎಲ್ಲಾ ಸದಸ್ಯರು ಸೇರಿ, ಆತನ ವಿರುದ್ಧ ಕುದೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಿದ್ದೇವೆ’ ಎಂದು ತಿಳಿಸಿದರು.</p>.<p>ಮುಖಂಡ ಹೊನ್ನರಾಜು ಮಾತನಾಡಿ, ‘ಭ್ರಷ್ಟ ಅಧಿಕಾರಿಯೊಬ್ಬ ಗ್ರಾಮ ಪಂಚಾಯಿತಿಯ 24 ಸದಸ್ಯರ ಗಮನಕ್ಕೆ ಬಾರದಂತೆ ಸಾರ್ವಜನಿಕರಿಂದ ಲಕ್ಷಾಂತರ ರೂಪಾಯಿ ಹಣ ವಸೂಲಿ ಮಾಡಿದ್ದು, ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಈತನ ವಿರುದ್ಧ ತನಿಖೆ ನಡೆಸಿ ಶಿಸ್ತು ಕ್ರಮ ಜರುಗಿಸಬೇಕು’ ಎಂದು ಒತ್ತಾಯಿಸಿದರು.</p>.<p>‘ಪಿಡಿಒ ಲೋಕೇಶ್ ಲಕ್ಷಾಂತರ ರೂಪಾಯಿ ಅವ್ಯವಹಾರ ನಡೆಸಿರುವ ಅನುಮಾನ ಇದೆ. ಇಲಾಖೆಯ ಹಿರಿಯ ಅಧಿಕಾರಿಗಳು ಈ ಕುರಿತು ಸೂಕ್ತ ತನಿಖೆ ಮಾಡಬೇಕು’ ಎಂದು ಮುಖಂಡ ಕೃಷ್ಣಮೂರ್ತಿ ಆಗ್ರಹಿಸಿದರೆ; ‘ಪಂಚಾಯಿತಿ ಸದಸ್ಯರಿಗೆ ಅನುಮಾನ ಬಾರದ ರೀತಿ ಚಾಣಾಕ್ಷತನದಿಂದ ಅಕ್ರಮ ಎಸಗಿದ್ದಾನೆ’ ಎಂದು ಗ್ರಾ.ಪಂ ಸದಸ್ಯ ಕೆ.ಟಿ.ವೆಂಕಟೇಶ್ ದೂರಿದರು.</p>.<p>‘ಸದಸ್ಯ ಬಾಲರಾಜು ಅವ್ಯವಹಾರಗಳಾಗದಂತೆ ನಿಗಾ ವಹಿಸುತ್ತಾರೆ ಎಂದು ಅವರನ್ನು ಉಪಾಧ್ಯಕ್ಷರನ್ನಾಗಿ ಮಾಡಿದ್ದೆವು. ಅವರು ಅವ್ಯವಹಾರ ತಡೆಯುವಲ್ಲಿ ವಿಫಲರಾಗಿದ್ದಾರೆ. ವರ್ಗಾವಣೆ ಆಗಿದ್ದ ಪಿಡಿಒನನ್ನು ಮತ್ತೆ ಕುದೂರು ಗ್ರಾ.ಪಂ.ಗೆ ಕರೆ ತಂದು ತಪ್ಪು ಮಾಡಿದ್ದು ಮಾಜಿ ಶಾಸಕ ಮಂಜುನಾಥ್’ ಎಂದು ಶಾಸಕ ಎಚ್.ಸಿ.ಬಾಲಕೃಷ್ಣ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>