ದೇಶದಲ್ಲಿ ಸಂಪನ್ಮೂಲ ಮತ್ತು ಮಾನವ ಸಂಪತ್ತು ಸಾಕಷ್ಟಿದೆ. ಆದರೆ, ದೇಶದ ರಾಜಕೀಯ ಸೇರಿದಂತೆ ಎಲ್ಲಾ ರಂಗಗಳಲ್ಲಿ ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ. ಪ್ರತಿಯೊಬ್ಬರು ಕಾನೂನಿನ ಬಗ್ಗೆ ತಿಳಿದುಕೊಳ್ಳಬೇಕು. ಲಂಚ ಕೊಡುವುದು, ತೆಗೆದುಕೊಳ್ಳುವುದು ಕಾನೂನುಬಾಹಿರ ಎಂಬುದನ್ನು ಮನವರಿಕೆ ಮಾಡಿಕೊಳ್ಳಬೇಕು. ದೇಶದ ಅಭಿವೃದ್ಧಿಗೆ ಮಾರಕವಾಗಿರುವ ಭ್ರಷ್ಟಾಚಾರದ ನಿರ್ಮೂಲನೆಗೆ ಎಲ್ಲರೂ ಮುಂದಾಗಬೇಕಿದೆ. ಪ್ರಾಮಾಣಿಕತೆಯಿಂದ ಬದುಕುವುದನ್ನು ರೂಢಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಲತಾ ಜೆ., ತಾಲ್ಲೂಕು ಪಂಚಾಯಿತಿಯ ಕಾರ್ಯ ನಿರ್ವಹಣಾಧಿ
ಕಾರಿ ಟಿ. ಪ್ರದೀಪ್ ಮಾತನಾಡಿದರು. ನ್ಯಾಯಾಲಯದ ಸಿಬ್ಬಂದಿ
ಹಾಜರಿದ್ದರು.