<p><strong>ಕನಕಪುರ:</strong> ಪದವೀಧರರ ಮತ ಪಡೆದು ಗೆದ್ದು ವಿಧಾನಪರಿಷತ್ಗೆ ಆಯ್ಕೆಯಾಗುವ ಸದಸ್ಯರು ಪದವೀಧರರ ಹಿತರಕ್ಷಣೆ ಕಾಪಾಡುವಲ್ಲಿ ವಿಫಲರಾಗಿದ್ದಾರೆ. ಪದವೀಧರರ ಆಶೋತ್ತರಗಳಿಗೆ ಸ್ಪಂದಿಸುತ್ತಿಲ್ಲ ಎಂದು ಬೆಂಗಳೂರು ಪದವೀಧರ ಕ್ಷೇತ್ರದ ಸ್ವತಂತ್ರ ಅಭ್ಯರ್ಥಿ ಆರ್.ಎಸ್.ಉದಯ್ ಸಿಂಗ್ ಆರೋಪಿಸಿದರು.</p>.<p>ಇಲ್ಲಿನ ರೋಟರಿ ಭವನದಲ್ಲಿ ಭಾನುವಾರ ಏರ್ಪಡಿಸಿದ್ದ ಸಭೆಯಲ್ಲಿ ಮಾತನಾಡಿದರು. ಬಿಜೆಪಿ ಮತ್ತು ಕಾಂಗ್ರೆಸ್ ತನ್ನ ಬೆಂಬಲಿತ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಿ ಮತದಾರರಿಗೆ ಆಮಿಷ ಒಡ್ಡುವ ಮೂಲಕ ಚುನಾವಣೆಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆಸುತ್ತಿದೆ ಎಂದು ದೂರಿದರು.</p>.<p>ಕಾಂಗ್ರೆಸ್ನ ರಾಮೋಜಿಗೌಡ, ಗಿಫ್ಟ್ಗಳನ್ನು ಕೊಡುವ ಮೂಲಕ ಪದವೀಧರ ಕ್ಷೇತ್ರವನ್ನು ಭ್ರಷ್ಟಾಚಾರಗೊಳಿಸಲು ಹೊರಟಿದ್ದಾರೆಂದು ಆರೋಪಿಸಿದರು.</p>.<p>ಬಿಜೆಪಿಯ ಆ.ದೇವೇಗೌಡ ಪದವೀಧರರ ಪರವಾಗಿ ಯಾವ ಪ್ರಶ್ನೆಯನ್ನು ಸದನದಲ್ಲಿ ಕೇಳಿಲ್ಲ. ಈಗ ಮತ್ತೆ ತಮ್ಮನ್ನು ಮರು ಆಯ್ಕೆ ಮಾಡುವಂತೆ ಪದವೀಧರರನ್ನು ಒತ್ತಾಯಿಸುವ ಮೂಲಕ ಮರು ಆಯ್ಕೆಗೆ ಪ್ರಯತ್ನಿಸುತ್ತಿದ್ದಾರೆ ಎಂದು ದೂರಿದರು.</p>.<p>ಪದವೀಧರರು ಸರಿಯಾದ ಉದ್ಯೋಗವಿಲ್ಲದೆ, ಗುತ್ತಿಗೆ ಆಧಾರದ ಮೇಲೆ ಅತ್ಯಂತ ಕಡಿಮೆ ಸಂಬಳಕ್ಕೆ ಕೆಲಸ ಮಾಡುತ್ತಿದ್ದಾರೆ. ಇವರ ಬಗ್ಗೆ ಕಿಂಚಿತ್ತು ಕಾಳಜಿ ಇಲ್ಲವಾಗಿದೆ ಎಂದರು.</p>.<p>ಸಿಂಡಿಕೇಟ್ ಮಾಜಿ ಸದಸ್ಯ ಶಿವಣ್ಣ ಮಾತನಾಡಿ, ಪದವೀಧರ ಮತಗಳನ್ನು ಪಡೆದು ಆಯ್ಕೆಯಾದ ಶಾಸಕರು ಪದವೀಧರರ ಪರವಾಗಿ ಕೆಲಸ ಮಾಡದೆ ಕೇವಲ ಅಧಿಕಾರಕ್ಕಾಗಿ ಆಯ್ಕೆಯಾಗುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. </p>.<p>ಪದವೀಧರ ಕ್ಷೇತ್ರವನ್ನು ಭ್ರಷ್ಟಗೊಳಿಸಲಾಗುತ್ತಿದೆ. ಇದಕ್ಕೆ ಸರ್ಕಾರದ ಬೆಂಬಲವೂ ಇದೆ ಎಂದು ಆರೋಪಿಸಿದರು.</p>.<p>ಮಾಜಿ ಸೈನಿಕರ ಅಸೋಸಿಯೇಷನ್ ಕಾರ್ಯದರ್ಶಿ ವಿಮಲೇಶ್ ಕುಮಾರ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕನಕಪುರ:</strong> ಪದವೀಧರರ ಮತ ಪಡೆದು ಗೆದ್ದು ವಿಧಾನಪರಿಷತ್ಗೆ ಆಯ್ಕೆಯಾಗುವ ಸದಸ್ಯರು ಪದವೀಧರರ ಹಿತರಕ್ಷಣೆ ಕಾಪಾಡುವಲ್ಲಿ ವಿಫಲರಾಗಿದ್ದಾರೆ. ಪದವೀಧರರ ಆಶೋತ್ತರಗಳಿಗೆ ಸ್ಪಂದಿಸುತ್ತಿಲ್ಲ ಎಂದು ಬೆಂಗಳೂರು ಪದವೀಧರ ಕ್ಷೇತ್ರದ ಸ್ವತಂತ್ರ ಅಭ್ಯರ್ಥಿ ಆರ್.ಎಸ್.ಉದಯ್ ಸಿಂಗ್ ಆರೋಪಿಸಿದರು.</p>.<p>ಇಲ್ಲಿನ ರೋಟರಿ ಭವನದಲ್ಲಿ ಭಾನುವಾರ ಏರ್ಪಡಿಸಿದ್ದ ಸಭೆಯಲ್ಲಿ ಮಾತನಾಡಿದರು. ಬಿಜೆಪಿ ಮತ್ತು ಕಾಂಗ್ರೆಸ್ ತನ್ನ ಬೆಂಬಲಿತ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಿ ಮತದಾರರಿಗೆ ಆಮಿಷ ಒಡ್ಡುವ ಮೂಲಕ ಚುನಾವಣೆಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆಸುತ್ತಿದೆ ಎಂದು ದೂರಿದರು.</p>.<p>ಕಾಂಗ್ರೆಸ್ನ ರಾಮೋಜಿಗೌಡ, ಗಿಫ್ಟ್ಗಳನ್ನು ಕೊಡುವ ಮೂಲಕ ಪದವೀಧರ ಕ್ಷೇತ್ರವನ್ನು ಭ್ರಷ್ಟಾಚಾರಗೊಳಿಸಲು ಹೊರಟಿದ್ದಾರೆಂದು ಆರೋಪಿಸಿದರು.</p>.<p>ಬಿಜೆಪಿಯ ಆ.ದೇವೇಗೌಡ ಪದವೀಧರರ ಪರವಾಗಿ ಯಾವ ಪ್ರಶ್ನೆಯನ್ನು ಸದನದಲ್ಲಿ ಕೇಳಿಲ್ಲ. ಈಗ ಮತ್ತೆ ತಮ್ಮನ್ನು ಮರು ಆಯ್ಕೆ ಮಾಡುವಂತೆ ಪದವೀಧರರನ್ನು ಒತ್ತಾಯಿಸುವ ಮೂಲಕ ಮರು ಆಯ್ಕೆಗೆ ಪ್ರಯತ್ನಿಸುತ್ತಿದ್ದಾರೆ ಎಂದು ದೂರಿದರು.</p>.<p>ಪದವೀಧರರು ಸರಿಯಾದ ಉದ್ಯೋಗವಿಲ್ಲದೆ, ಗುತ್ತಿಗೆ ಆಧಾರದ ಮೇಲೆ ಅತ್ಯಂತ ಕಡಿಮೆ ಸಂಬಳಕ್ಕೆ ಕೆಲಸ ಮಾಡುತ್ತಿದ್ದಾರೆ. ಇವರ ಬಗ್ಗೆ ಕಿಂಚಿತ್ತು ಕಾಳಜಿ ಇಲ್ಲವಾಗಿದೆ ಎಂದರು.</p>.<p>ಸಿಂಡಿಕೇಟ್ ಮಾಜಿ ಸದಸ್ಯ ಶಿವಣ್ಣ ಮಾತನಾಡಿ, ಪದವೀಧರ ಮತಗಳನ್ನು ಪಡೆದು ಆಯ್ಕೆಯಾದ ಶಾಸಕರು ಪದವೀಧರರ ಪರವಾಗಿ ಕೆಲಸ ಮಾಡದೆ ಕೇವಲ ಅಧಿಕಾರಕ್ಕಾಗಿ ಆಯ್ಕೆಯಾಗುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. </p>.<p>ಪದವೀಧರ ಕ್ಷೇತ್ರವನ್ನು ಭ್ರಷ್ಟಗೊಳಿಸಲಾಗುತ್ತಿದೆ. ಇದಕ್ಕೆ ಸರ್ಕಾರದ ಬೆಂಬಲವೂ ಇದೆ ಎಂದು ಆರೋಪಿಸಿದರು.</p>.<p>ಮಾಜಿ ಸೈನಿಕರ ಅಸೋಸಿಯೇಷನ್ ಕಾರ್ಯದರ್ಶಿ ವಿಮಲೇಶ್ ಕುಮಾರ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>