ಕಾರ್ಮಿಕರ ಬೆಂಬಲ: ರೈತರ ಟ್ರ್ಯಾಕ್ಟರ್ ಪರೇಡ್ಗೆ ಬಿಡದಿಯ ಟೊಯೊಟಾ ಸೇರಿದಂತೆ ವಿವಿಧ ಕಾರ್ಖಾನೆಗಳ ಕಾರ್ಮಿಕರು ಬೆಂಬಲ ಸೂಚಿಸಿದ್ದಾರೆ. ಕಾರ್ಮಿಕರೂ ನೂರಾರು ಸಂಖ್ಯೆಯಲ್ಲಿ ಬೆಂಗಳೂರಿನತ್ತ ತೆರಳುವ ನಿರೀಕ್ಷೆ ಇದೆ. ಜಿಲ್ಲೆಯ ಮುಸ್ಲಿಂ ಸಂಘಟನೆಗಳು ಸಹ ಹೋರಾಟ ಬೆಂಬಲಿಸಿವೆ. ಟ್ರ್ಯಾಕ್ಟರ್ ಹೊರತುಪಡಿಸಿ ಕಾರು, ಬಸ್, ಟೊಂಪೊ ಮೊದಲಾದ ವಾಹನಗಳ ಮೂಲಕವೂ ರಾಜಧಾನಿಗೆ ತೆರಳಲು ರೈತರು ವ್ಯವಸ್ಥೆ ಮಾಡಿಕೊಂಡಿದ್ದಾರೆ.