ರಾಮನಗರ: ತಾಲ್ಲೂಕಿನ ಹುಣಸನಹಳ್ಳಿಯ ವ್ಯಕ್ತಿಯೊಬ್ಬರು ಕೋವಿಡ್-19ನಿಂದಾಗಿ ಮೃತಪಟ್ಟಿದ್ದಾರೆ. 43 ವರ್ಷದ ಇವರು ರಾಜರಾಜೇಶ್ವರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆಗೆ ಸ್ಪಂದಿಸದೇ ಬುಧವಾರ ಆಸ್ಪತ್ರೆಯಲ್ಲಿ ಕೊನೆಯುಸಿರು ಎಳೆದರು. ಇದರಿಂದಾಗಿ ಮೃತಪಟ್ಟವರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ.
ಮೂವರಿಗೆ ಸೋಂಕು: ಬುಧವಾರ ಜಿಲ್ಲೆಯಲ್ಲಿ ಮೂವರಲ್ಲಿ ಸೋಂಕು ದೃಢವಾಗಿದೆ. ಚನ್ನಪಟ್ಟಣದಲ್ಲಿ ಇಬ್ಬರು ಹಾಗೂ ಮಾಗಡಿಯಲ್ಲಿ ಒಬ್ಬರಲ್ಲಿ ಸೋಂಕು ಕಂಡುಬಂದಿದ್ದು, ಅವರನ್ನು ಕೋವಿಡ್-19 ಆಸ್ಪತ್ರೆಗೆ ದಾಖಲಿಸಲಾಗಿದೆ. ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 393ಕ್ಕೆ ಏರಿಕೆ ಆಗಿದೆ.