ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

65ರ ವೃದ್ಧೆಗೆ ಸೋಂಕು

ಜಿಲ್ಲೆಯಲ್ಲಿ ಮತ್ತೊಂದು ಪ್ರಕರಣ ಧೃಢ: ಸೋಂಕಿತರ ಸಂಖ್ಯೆ ಐದಕ್ಕೆ ಏರಿಕೆ
Last Updated 7 ಜೂನ್ 2020, 14:48 IST
ಅಕ್ಷರ ಗಾತ್ರ

ರಾಮನಗರ: ಜಿಲ್ಲೆಯಲ್ಲಿ ಮತ್ತೊಬ್ಬ ವ್ಯಕ್ತಿಗೆ ಭಾನುವಾರ ಕೋವಿಡ್‌-19 ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ.

ಚನ್ನಪಟ್ಟಣ ತಾಲೂಕಿನ ಬಾಣಂತಹಳ್ಳಿಯ 65 ವರ್ಷದ ವೃದ್ಧೆಗೆ ಸೋಂಕು ಇರುವುದು ಖಾತ್ರಿಯಾಗಿದೆ. ಸದ್ಯ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಅವರನ್ನು ಚಿಕಿತ್ಸೆಗೆ ದಾಖಲಿಸಲಾಗಿದೆ. ಈ ಮಹಿಳೆ ಅನಾರೋಗ್ಯದ ಕಾರಣದಿಂದ ಹತ್ತು ದಿನಗಳ ಹಿಂದೆ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ದರು. ಅಲ್ಲಿ ಸೋಂಕು ತಗುಲಿರಬಹುದು ಎಂದು ಶಂಕಿಸಲಾಗಿದೆ. ‌

’ಕಳೆದ ಹಲವು ದಿನಗಳಿಂದ ಸೋಂಕಿತೆ ಬೆಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಮುಂಜಾಗ್ರತ ಕ್ರಮವಾಗಿ ವೃದ್ಧೆಯ ಸಂಪರ್ಕಕ್ಕೆ ಬಂದವರನ್ನು ಪತ್ತೆ ಹಚ್ಚಲಾಗುವುದು’ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ನಿರಂಜನ್ ತಿಳಿಸಿದರು.

ರಾಮನಗರ ಕುಂಬಾರ ಬೀದಿ 57ವರ್ಷ ವಯಸ್ಸಿನ ವ್ಯಕ್ತಿಗೆ ಇದೇ 1ರಂದು ಕೋವಿಡ್‌-19 ಸೋಂಕು ದೃಢಪಟ್ಟಿತ್ತು. ಇವರ ಪ್ರಾಥಮಿಕ ಸಂಪರ್ಕದಲ್ಲಿದ್ದ ಮತ್ತೊಬ್ಬ ವ್ಯಕ್ತಿಗೂ ಸೋಂಕು ಹಬ್ಬಿತ್ತು. ಅದೇ ದಿನ ಚನ್ನಪಟ್ಟಣ ತಾಲೂಕಿನ ಶ್ಯಾನಬೋಗನಹಳ್ಳಿಯ 27 ವರ್ಷದ ವ್ಯಕ್ತಿಯಲ್ಲಿ ಕೋವಿಡ್ ಪಾಸಿಟಿವ್ ಕಂಡು ಬಂದಿತ್ತು. ಈ ಇಬ್ಬರೂ ರಾಮನಗರದ ಕೋವಿಡ್ ರೆಫರಲ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಾಗಡಿ ತಾಲ್ಲೂಕಿನ ಗ್ರಾಮವೊಂದರ ಎರಡು ವರ್ಷದ ಮಗುವಿಗೆ ಸೋಂಕು ತಗುಲಿತ್ತು. ಈಗ ಮಗು ಗುಣಮುಖವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT