ವೆಂಕಟೇಶ್ ಬೆಂಗಳೂರಿನಲ್ಲಿ ನೆಲೆಸಿದ್ದು, ಈಚೆಗೆ ರಾಮನಗರಕ್ಕೆ ವಾಪಸ್ ಆಗಿದ್ದರು. ಕಳೆದೊಂದು ವಾರದಿಂದ ತಮ್ಮ ಮನೆಯಲ್ಲೇ ತಂಗಿದ್ದರು. ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಇದೇ ತಿಂಗಳ 17ರಂದು ರಾಮನಗರದ ಫೀವರ್ ಕ್ಲಿನಿಕ್ನಲ್ಲಿ ತಪಾಸಣೆಗೆ ಒಳಗಾಗಿದ್ದರು. ಕೋವಿಡ್ ಪರೀಕ್ಷೆ ಸಹ ಮಾಡಿಸಿಕೊಂಡಿದ್ದರು. ಪರೀಕ್ಷೆ ವರದಿ ಬಂದಿರಲಿಲ್ಲ. ಆದರೆ ಆತಂಕಕ್ಕೆ ಒಳಗಾಗಿದ್ದ ಅವರು ಮನೆಯಿಂದ ಈಚೆಗೆ ಬರುತ್ತಿರಲಿಲ್ಲ ಎನ್ನಲಾಗಿದೆ.