ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇನ್ನೊಂದು ವಾರದಲ್ಲಿ ಕೋವಿಡ್ ಲಸಿಕೆ ಹಂಚಿಕೆ: ಡಿಸಿಎಂ ಅಶ್ವತ್ಥನಾರಾಯಣ

Last Updated 8 ಜನವರಿ 2021, 6:37 IST
ಅಕ್ಷರ ಗಾತ್ರ

ರಾಮನಗರ: ಇನ್ನು ಒಂದು ವಾರದಲ್ಲಿ ರಾಜ್ಯದಲ್ಲಿ ಕೋವಿಡ್ ಲಸಿಕೆ ಲಭ್ಯ ಆಗಲಿದ್ದು, ವಿತರಣೆಗೆ ಅಗತ್ಯ ಸಿದ್ಧತೆಗಳು ನಡೆದಿದೆ ಎಂದು ಉಪ ಮುಖ್ಯಮಂತ್ರಿ ಅಶ್ವತ್ಥನಾರಾಯಣ ತಿಳಿಸಿದರು.

ಇಲ್ಲಿ‌ನ ಜಿಲ್ಲಾ ಆಸ್ಪತ್ರೆಯಲ್ಲಿ ಶುಕ್ರವಾರ ಕೋವಿಡ್ ಲಸಿಕೆಯ ಪೂರ್ವ ತಾಲೀಮು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಲಸಿಕೆ ನೀಡಲು ಬೇಕಾದ ಪೂರ್ವಸಿದ್ಧತೆಗಳು ಯಶಸ್ವಿಯಾಗಿ ನಡೆದಿವೆ. ಮೊದಲ ಹಂತದಲ್ಲಿ ಆರೋಗ್ಯ ವಲಯದ ಎಲ್ಲ ಸಿಬ್ಬಂದಿಗೆ ಲಸಿಕೆ ಹಾಕಲಾಗುವುದು. ಮೊದಲ ದಿನ ಒಂದು ಲಸಿಕೆ, 28 ದಿನಗಳ ತರುವಾಯ ಇನ್ನೊಂದು ಲಸಿಕೆ ನೀಡಲಾಗುವುದು ಎಂದು ವಿವರಿಸಿದರು.

ಜಿಲ್ಲಾಧಿಕಾರಿ ಎಂ.ಎಸ್. ಅರ್ಚನಾ, ಜಿಲ್ಲಾ ಆರೋಗ್ಯಾಧಿಕಾರಿ ನಿರಂಜನ್, ಆರ್ ಸಿಎಚ್ ಅಧಿಕಾರಿ ಪದ್ಮಾ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT