ರಾಮನಗರ: ಇನ್ನು ಒಂದು ವಾರದಲ್ಲಿ ರಾಜ್ಯದಲ್ಲಿ ಕೋವಿಡ್ ಲಸಿಕೆ ಲಭ್ಯ ಆಗಲಿದ್ದು, ವಿತರಣೆಗೆ ಅಗತ್ಯ ಸಿದ್ಧತೆಗಳು ನಡೆದಿದೆ ಎಂದು ಉಪ ಮುಖ್ಯಮಂತ್ರಿ ಅಶ್ವತ್ಥನಾರಾಯಣ ತಿಳಿಸಿದರು.
ಇಲ್ಲಿನ ಜಿಲ್ಲಾ ಆಸ್ಪತ್ರೆಯಲ್ಲಿ ಶುಕ್ರವಾರ ಕೋವಿಡ್ ಲಸಿಕೆಯ ಪೂರ್ವ ತಾಲೀಮು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಲಸಿಕೆ ನೀಡಲು ಬೇಕಾದ ಪೂರ್ವಸಿದ್ಧತೆಗಳು ಯಶಸ್ವಿಯಾಗಿ ನಡೆದಿವೆ. ಮೊದಲ ಹಂತದಲ್ಲಿ ಆರೋಗ್ಯ ವಲಯದ ಎಲ್ಲ ಸಿಬ್ಬಂದಿಗೆ ಲಸಿಕೆ ಹಾಕಲಾಗುವುದು. ಮೊದಲ ದಿನ ಒಂದು ಲಸಿಕೆ, 28 ದಿನಗಳ ತರುವಾಯ ಇನ್ನೊಂದು ಲಸಿಕೆ ನೀಡಲಾಗುವುದು ಎಂದು ವಿವರಿಸಿದರು.
ಜಿಲ್ಲಾಧಿಕಾರಿ ಎಂ.ಎಸ್. ಅರ್ಚನಾ, ಜಿಲ್ಲಾ ಆರೋಗ್ಯಾಧಿಕಾರಿ ನಿರಂಜನ್, ಆರ್ ಸಿಎಚ್ ಅಧಿಕಾರಿ ಪದ್ಮಾ ಇದ್ದರು.