<p><strong>ರಾಮನಗರ</strong>: ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಲಸಿಕೆ ಕಾರ್ಯಕ್ರಮ ಚುರುಕಾಗಿದ್ದು, 45 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ಹಾಕಲು ಆರೋಗ್ಯ ಇಲಾಖೆಯು ಸಿದ್ಧತೆ ಮಾಡಿಕೊಂಡಿದೆ.</p>.<p>ಜಿಲ್ಲೆಯಲ್ಲಿ 45 ವರ್ಷ ಮೇಲ್ಪಟ್ಟ 3,09,929 ಮಂದಿ ಇದ್ದಾರೆ. ಈ ಎಲ್ಲರಿಗೂ ಇದೇ ತಿಂಗಳಲ್ಲಿ ಲಸಿಕೆ ಹಾಕುವ ಗುರಿಯನ್ನು ಆರೋಗ್ಯ ಇಲಾಖೆಯು ಹೊಂದಿದೆ. ಇದಕ್ಕಾಗಿ ಲಸಿಕಾ ಕೇಂದ್ರಗಳ ಸಂಖ್ಯೆಯನ್ನು ಹೆಚ್ಚಿಸಲಾಗಿದೆ. ಪ್ರಸ್ತುತ 73 ಸರ್ಕಾರಿ ಆಸ್ಪತ್ರೆ ಹಾಗೂ 3 ಖಾಸಗಿ ಆಸ್ಪತ್ರೆಗಳಲ್ಲಿ ಲಸಿಕೆ ನೀಡಲಾಗುತ್ತಿತ್ತು. ಇದರ ಜೊತೆಗೆ ಜಿಲ್ಲೆಯ 252 ಆರೋಗ್ಯ ಉಪ ಕೇಂದ್ರಗಳಲ್ಲಿಯೂ ವೈದ್ಯರ ಲಭ್ಯತೆ ಆಧಾರದ ಮೇಲೆ ಲಸಿಕೆಗೆ ವ್ಯವಸ್ಥೆ ಮಾಡಲಾಗುತ್ತಿದೆ. ಈ ಆರೋಗ್ಯ ಕೇಂದ್ರಗಳಿಗೆ ಲಸಿಕೆ ಪಡೆಯಲು ಬರುವವರಿಗೆ ಕುಳಿತುಕೊಳ್ಳಲು ಆಸನದ ವ್ಯವಸ್ಥೆ, ಕುಡಿಯುವ ನೀರು ಸೇರಿ ಮೂಲ ವ್ಯವಸ್ಥೆಯನ್ನು ಸಹ ಕಲ್ಪಿಸಲಾಗಿದೆ.</p>.<p>‘ಇದೇ 1 ರಂದು ಜಿಲ್ಲೆಯಲ್ಲಿ 102 ಲಸಿಕಾ ಕೇಂದ್ರಗಳಲ್ಲಿ ಜನರಿಗೆ ಲಸಿಕೆ ನೀಡಲಾಗಿದ್ದು, ಹಂತಹಂತವಾಗಿ ಈ ಸಂಖ್ಯೆಯಲ್ಲಿ ಏರಿಕೆ ಆಗಲಿದೆ. ಪ್ರತಿ ಕೇಂದ್ರದಲ್ಲಿ ನಿತ್ಯ ಸರಾಸರಿ 128 ಜನರು ಲಸಿಕೆ ಪಡೆದುಕೊಂಡರೆ ಏಪ್ರಿಲ್ ತಿಂಗಳಲ್ಲಿ ಗುರಿ ಸಾಧನೆ ಸಾಧ್ಯವಾಗಲಿದೆ’ ಎನ್ನುತ್ತಾರೆ ಜಿಲ್ಲಾ ಆರ್ಸಿಎಚ್ ಅಧಿಕಾರಿ ಡಾ. ಪದ್ಮಾ.</p>.<p>ದಾಖಲೆ ತನ್ನಿ: ಲಸಿಕೆ ಪಡೆಯಲು ಆರೋಗ್ಯ ಕೇಂದ್ರಕ್ಕೆ ಬರುವವರು ತಮ್ಮ ವಯಸ್ಸಿನ ಕುರಿತ ದಾಖಲೆಗಳನ್ನು ತರಬೇಕು. ಆಧಾರ್ ಕಾರ್ಡ್ ಜೊತೆಗೆ ಮೊಬೈಲ್ ಸಂಖ್ಯೆ ಸಲ್ಲಿಸಿದಲ್ಲಿ ಲಸಿಕೆ ಸಿಗಲಿದೆ. 28 ದಿನದ ನಂತರ ಮತ್ತೊಂದು ಲಸಿಕೆ ಪಡೆಯಬೇಕಿದೆ.</p>.<p>88 ಸಾವಿರ ಲಸಿಕೆ: ಜಿಲ್ಲೆಯಲ್ಲಿ ಸದ್ಯ 88 ಸಾವಿರ ಜನರಿಗೆ ಸಾಕಾಗುವಷ್ಟು ಲಸಿಕೆ ಲಭ್ಯ ಇದೆ. ಇದನ್ನು ಬಳಸಿಕೊಂಡು ಒಂದು ವಾರಕ್ಕೂ ಹೆಚ್ಚು ಕಾಲ ನಿರಂತರವಾಗಿ ಲಸಿಕೆ ಕಾರ್ಯಕ್ರಮ ಆಯೋಜಿಸಬಹುದಾಗಿದೆ. ಮುಂದಿನ ದಿನಕ್ಕೂ ಬೇಡಿಕೆ ಅನುಗುಣವಾಗಿ ಲಸಿಕೆಯನ್ನು ಕೇಂದ್ರದಿಂದ ಪಡೆದುಕೊಳ್ಳಲಾಗುವುದು ಎನ್ನುತ್ತಾರೆ ಆರೋಗ್ಯ ಇಲಾಖೆಯ ಅಧಿಕಾರಿಗಳು.</p>.<p><strong>ಕೆಎಸ್ಆರ್ಟಿಸಿ, ಅಂಚೆ ನೌಕರರಿಗೂ ಅವಕಾಶ</strong></p>.<p>ರಾಜ್ಯ ಸರ್ಕಾರವು ಕೆ.ಎಸ್.ಆರ್.ಟಿಸಿ ಹಾಗೂ ಅಂಚೆ ಇಲಾಖೆ ನೌಕರರನ್ನು ಕೋವಿಡ್ ಸೈನಿಕರೆಂದು ಪರಿಗಣಿಸಿದೆ. ಅದರಲ್ಲೂ ಸಾರಿಗೆ ನೌಕರರು ನಿತ್ಯ ನೂರಾರು ಜನರ ಸಂಪರ್ಕದಲ್ಲಿ ಇದ್ದು, ಸೋಂಕಿನ ಅಪಾಯದ ಸಾಧ್ಯತೆ ಅತಿ ಹೆಚ್ಚಿದೆ. ಈ ಹಿನ್ನೆಲೆಯಲ್ಲಿ ಅವರಿಗೂ ಸರ್ಕಾರದಿಂದ ಉಚಿತವಾಗಿ ಲಸಿಕೆ ಸಿಗಲಿದೆ. ಈ ಎರಡೂ ಇಲಾಖೆಗಳ ಸಿಬ್ಬಂದಿ ತಮ್ಮ ಇಲಾಖೆಯ ಗುರುತಿನ ಚೀಟಿಯನ್ನು ಹಾಜರುಪಡಿಸಿ ಲಸಿಕೆ ಪಡೆದುಕೊಳ್ಳಬಹುದಾಗಿದೆ.</p>.<p><strong>ಐದು ಪ್ರಕರಣ ದೃಢ</strong></p>.<p>ಜಿಲ್ಲೆಯಲ್ಲಿ ಶುಕ್ರವಾರ ಐವರಲ್ಲಿ ಕೋವಿಡ್ ಸೋಂಕು ದೃಢವಾಗಿದೆ. ರಾಮನಗರದ 1 ಹಾಗೂ ಕನಕಪುರ ತಾಲ್ಲೂಕಿನ 4 ಮಂದಿಗೆ ಸೋಂಕು ತಗುಲಿದೆ. ಈ ದಿನ ಆಸ್ಪತ್ರೆಯಿಂದ 9 ಮಂದಿ ಗುಣಮುಖರಾಗಿ ಹೊರಬಂದಿದ್ದಾರೆ. ಜಿಲ್ಲೆಯಲ್ಲಿ 43 ಸಕ್ರಿಯ ಪ್ರಕರಣಗಳು ಇವೆ.</p>.<p><strong>***</strong><br />ಕೋವಿಡ್ ಪ್ರಕರಣಗಳು ಕ್ರಮೇಣ ಹೆಚ್ಚುತ್ತಿವೆ. ಜನರು ವದಂತಿಗಳಿಗೆ ಕಿವಿಗೊಡದೇ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಲಸಿಕೆ ಪಡೆಯಬೇಕು.</p>.<p><strong>- ಡಾ. ಪದ್ಮಾ, ಜಿಲ್ಲಾ ಆರ್ಸಿಎಚ್ ಅಧಿಕಾರಿ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಮನಗರ</strong>: ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಲಸಿಕೆ ಕಾರ್ಯಕ್ರಮ ಚುರುಕಾಗಿದ್ದು, 45 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ಹಾಕಲು ಆರೋಗ್ಯ ಇಲಾಖೆಯು ಸಿದ್ಧತೆ ಮಾಡಿಕೊಂಡಿದೆ.</p>.<p>ಜಿಲ್ಲೆಯಲ್ಲಿ 45 ವರ್ಷ ಮೇಲ್ಪಟ್ಟ 3,09,929 ಮಂದಿ ಇದ್ದಾರೆ. ಈ ಎಲ್ಲರಿಗೂ ಇದೇ ತಿಂಗಳಲ್ಲಿ ಲಸಿಕೆ ಹಾಕುವ ಗುರಿಯನ್ನು ಆರೋಗ್ಯ ಇಲಾಖೆಯು ಹೊಂದಿದೆ. ಇದಕ್ಕಾಗಿ ಲಸಿಕಾ ಕೇಂದ್ರಗಳ ಸಂಖ್ಯೆಯನ್ನು ಹೆಚ್ಚಿಸಲಾಗಿದೆ. ಪ್ರಸ್ತುತ 73 ಸರ್ಕಾರಿ ಆಸ್ಪತ್ರೆ ಹಾಗೂ 3 ಖಾಸಗಿ ಆಸ್ಪತ್ರೆಗಳಲ್ಲಿ ಲಸಿಕೆ ನೀಡಲಾಗುತ್ತಿತ್ತು. ಇದರ ಜೊತೆಗೆ ಜಿಲ್ಲೆಯ 252 ಆರೋಗ್ಯ ಉಪ ಕೇಂದ್ರಗಳಲ್ಲಿಯೂ ವೈದ್ಯರ ಲಭ್ಯತೆ ಆಧಾರದ ಮೇಲೆ ಲಸಿಕೆಗೆ ವ್ಯವಸ್ಥೆ ಮಾಡಲಾಗುತ್ತಿದೆ. ಈ ಆರೋಗ್ಯ ಕೇಂದ್ರಗಳಿಗೆ ಲಸಿಕೆ ಪಡೆಯಲು ಬರುವವರಿಗೆ ಕುಳಿತುಕೊಳ್ಳಲು ಆಸನದ ವ್ಯವಸ್ಥೆ, ಕುಡಿಯುವ ನೀರು ಸೇರಿ ಮೂಲ ವ್ಯವಸ್ಥೆಯನ್ನು ಸಹ ಕಲ್ಪಿಸಲಾಗಿದೆ.</p>.<p>‘ಇದೇ 1 ರಂದು ಜಿಲ್ಲೆಯಲ್ಲಿ 102 ಲಸಿಕಾ ಕೇಂದ್ರಗಳಲ್ಲಿ ಜನರಿಗೆ ಲಸಿಕೆ ನೀಡಲಾಗಿದ್ದು, ಹಂತಹಂತವಾಗಿ ಈ ಸಂಖ್ಯೆಯಲ್ಲಿ ಏರಿಕೆ ಆಗಲಿದೆ. ಪ್ರತಿ ಕೇಂದ್ರದಲ್ಲಿ ನಿತ್ಯ ಸರಾಸರಿ 128 ಜನರು ಲಸಿಕೆ ಪಡೆದುಕೊಂಡರೆ ಏಪ್ರಿಲ್ ತಿಂಗಳಲ್ಲಿ ಗುರಿ ಸಾಧನೆ ಸಾಧ್ಯವಾಗಲಿದೆ’ ಎನ್ನುತ್ತಾರೆ ಜಿಲ್ಲಾ ಆರ್ಸಿಎಚ್ ಅಧಿಕಾರಿ ಡಾ. ಪದ್ಮಾ.</p>.<p>ದಾಖಲೆ ತನ್ನಿ: ಲಸಿಕೆ ಪಡೆಯಲು ಆರೋಗ್ಯ ಕೇಂದ್ರಕ್ಕೆ ಬರುವವರು ತಮ್ಮ ವಯಸ್ಸಿನ ಕುರಿತ ದಾಖಲೆಗಳನ್ನು ತರಬೇಕು. ಆಧಾರ್ ಕಾರ್ಡ್ ಜೊತೆಗೆ ಮೊಬೈಲ್ ಸಂಖ್ಯೆ ಸಲ್ಲಿಸಿದಲ್ಲಿ ಲಸಿಕೆ ಸಿಗಲಿದೆ. 28 ದಿನದ ನಂತರ ಮತ್ತೊಂದು ಲಸಿಕೆ ಪಡೆಯಬೇಕಿದೆ.</p>.<p>88 ಸಾವಿರ ಲಸಿಕೆ: ಜಿಲ್ಲೆಯಲ್ಲಿ ಸದ್ಯ 88 ಸಾವಿರ ಜನರಿಗೆ ಸಾಕಾಗುವಷ್ಟು ಲಸಿಕೆ ಲಭ್ಯ ಇದೆ. ಇದನ್ನು ಬಳಸಿಕೊಂಡು ಒಂದು ವಾರಕ್ಕೂ ಹೆಚ್ಚು ಕಾಲ ನಿರಂತರವಾಗಿ ಲಸಿಕೆ ಕಾರ್ಯಕ್ರಮ ಆಯೋಜಿಸಬಹುದಾಗಿದೆ. ಮುಂದಿನ ದಿನಕ್ಕೂ ಬೇಡಿಕೆ ಅನುಗುಣವಾಗಿ ಲಸಿಕೆಯನ್ನು ಕೇಂದ್ರದಿಂದ ಪಡೆದುಕೊಳ್ಳಲಾಗುವುದು ಎನ್ನುತ್ತಾರೆ ಆರೋಗ್ಯ ಇಲಾಖೆಯ ಅಧಿಕಾರಿಗಳು.</p>.<p><strong>ಕೆಎಸ್ಆರ್ಟಿಸಿ, ಅಂಚೆ ನೌಕರರಿಗೂ ಅವಕಾಶ</strong></p>.<p>ರಾಜ್ಯ ಸರ್ಕಾರವು ಕೆ.ಎಸ್.ಆರ್.ಟಿಸಿ ಹಾಗೂ ಅಂಚೆ ಇಲಾಖೆ ನೌಕರರನ್ನು ಕೋವಿಡ್ ಸೈನಿಕರೆಂದು ಪರಿಗಣಿಸಿದೆ. ಅದರಲ್ಲೂ ಸಾರಿಗೆ ನೌಕರರು ನಿತ್ಯ ನೂರಾರು ಜನರ ಸಂಪರ್ಕದಲ್ಲಿ ಇದ್ದು, ಸೋಂಕಿನ ಅಪಾಯದ ಸಾಧ್ಯತೆ ಅತಿ ಹೆಚ್ಚಿದೆ. ಈ ಹಿನ್ನೆಲೆಯಲ್ಲಿ ಅವರಿಗೂ ಸರ್ಕಾರದಿಂದ ಉಚಿತವಾಗಿ ಲಸಿಕೆ ಸಿಗಲಿದೆ. ಈ ಎರಡೂ ಇಲಾಖೆಗಳ ಸಿಬ್ಬಂದಿ ತಮ್ಮ ಇಲಾಖೆಯ ಗುರುತಿನ ಚೀಟಿಯನ್ನು ಹಾಜರುಪಡಿಸಿ ಲಸಿಕೆ ಪಡೆದುಕೊಳ್ಳಬಹುದಾಗಿದೆ.</p>.<p><strong>ಐದು ಪ್ರಕರಣ ದೃಢ</strong></p>.<p>ಜಿಲ್ಲೆಯಲ್ಲಿ ಶುಕ್ರವಾರ ಐವರಲ್ಲಿ ಕೋವಿಡ್ ಸೋಂಕು ದೃಢವಾಗಿದೆ. ರಾಮನಗರದ 1 ಹಾಗೂ ಕನಕಪುರ ತಾಲ್ಲೂಕಿನ 4 ಮಂದಿಗೆ ಸೋಂಕು ತಗುಲಿದೆ. ಈ ದಿನ ಆಸ್ಪತ್ರೆಯಿಂದ 9 ಮಂದಿ ಗುಣಮುಖರಾಗಿ ಹೊರಬಂದಿದ್ದಾರೆ. ಜಿಲ್ಲೆಯಲ್ಲಿ 43 ಸಕ್ರಿಯ ಪ್ರಕರಣಗಳು ಇವೆ.</p>.<p><strong>***</strong><br />ಕೋವಿಡ್ ಪ್ರಕರಣಗಳು ಕ್ರಮೇಣ ಹೆಚ್ಚುತ್ತಿವೆ. ಜನರು ವದಂತಿಗಳಿಗೆ ಕಿವಿಗೊಡದೇ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಲಸಿಕೆ ಪಡೆಯಬೇಕು.</p>.<p><strong>- ಡಾ. ಪದ್ಮಾ, ಜಿಲ್ಲಾ ಆರ್ಸಿಎಚ್ ಅಧಿಕಾರಿ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>