<p><strong>ಚನ್ನಪಟ್ಟಣ</strong>: ಶಾಸಕ ಸಿ.ಪಿ.ಯೋಗೇಶ್ವರ್ ಮಂಗಳವಾರ ತಾಲ್ಲೂಕಿನ ಮಾಕಳಿ, ದಶವಾರ, ನಾಗವಾರ, ಬೇವೂರು ಗ್ರಾ.ಪಂ.ವ್ಯಾಪ್ತಿಗಳಲ್ಲಿ ಇ–ಸ್ವತ್ತು ಆಂದೋಲನ ಹಾಗೂ ಸಾರ್ವಜನಿಕ ಕುಂದುಕೊರತೆ ಅಹವಾಲು ಸ್ವೀಕಾರ ಸಭೆ ಆಯೋಜಿಸಿದ್ದರು.</p>.<p>ಗ್ರಾ.ಪಂ.ವ್ಯಾಪ್ತಿಗಳಲ್ಲಿ ಕುಡಿಯುವ ನೀರು, ವಿದ್ಯುತ್ ಸಮಸ್ಯೆ, ಕಾಡು ಪ್ರಾಣಿಗಳ ಸಮಸ್ಯೆ, ರಸ್ತೆ, ಚರಂಡಿ ಸಮಸ್ಯೆ, ಶಾಲೆಗಳ ಕಟ್ಟಡ, ಶಿಕ್ಷಕರ ಕೊರತೆ, ಅಂಗನವಾಡಿ ಸೌಲಭ್ಯ ಸಮಸ್ಯೆ, ತೋಟಗಾರಿಕೆ, ಕೃಷಿ, ನೀರಾವರಿ ಇಲಾಖೆ ಸಮಸ್ಯೆಯನ್ನು ಶಾಸಕರ ಜತೆ ಹಂಚಿಕೊಂಡರು.</p>.<p>ಪಂಚಾಯಿತಿ ವ್ಯಾಪ್ತಿಯಲ್ಲಿ ಅಭಿವೃದ್ಧಿ ಕಾರ್ಯ ನಡೆಯುತ್ತಿಲ್ಲ ಎಂದು ಆರೋಪಗಳು ಬಂದವು. ಇದಕ್ಕೆ ಶಾಸಕ ಯೋಗೇಶ್ವರ್ ಕುಪಿತರಾಗಿ, ಸ್ಥಳದಲ್ಲಿ ಇದ್ದ ಗ್ರಾ.ಪಂ. ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದರು. <br /> ತಾ.ಪಂ ಇ.ಒ ಸಂದೀಪ್, ಕಾವೇರಿ ನೀರಾವರಿ ನಿಗಮದ ಎಇಇ ಸುರೇಶ್, ಕೃಷಿ ಇಲಾಖೆ ಸಹಾಯಕ ನಿರ್ದೇಶಕಿ ಅಪರ್ಣಾ, ಸಿ.ಡಿ.ಪಿ.ಒ ಪ್ರಮೀಳಾ, ಜಲಜೀವನ್ ಮಿಷನ್ ಎಂಜಿನಿಯರ್ ಮಧು, ಗ್ರಾ.ಪಂ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಸ್ಥಳೀಯ ಮುಖಂಡರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚನ್ನಪಟ್ಟಣ</strong>: ಶಾಸಕ ಸಿ.ಪಿ.ಯೋಗೇಶ್ವರ್ ಮಂಗಳವಾರ ತಾಲ್ಲೂಕಿನ ಮಾಕಳಿ, ದಶವಾರ, ನಾಗವಾರ, ಬೇವೂರು ಗ್ರಾ.ಪಂ.ವ್ಯಾಪ್ತಿಗಳಲ್ಲಿ ಇ–ಸ್ವತ್ತು ಆಂದೋಲನ ಹಾಗೂ ಸಾರ್ವಜನಿಕ ಕುಂದುಕೊರತೆ ಅಹವಾಲು ಸ್ವೀಕಾರ ಸಭೆ ಆಯೋಜಿಸಿದ್ದರು.</p>.<p>ಗ್ರಾ.ಪಂ.ವ್ಯಾಪ್ತಿಗಳಲ್ಲಿ ಕುಡಿಯುವ ನೀರು, ವಿದ್ಯುತ್ ಸಮಸ್ಯೆ, ಕಾಡು ಪ್ರಾಣಿಗಳ ಸಮಸ್ಯೆ, ರಸ್ತೆ, ಚರಂಡಿ ಸಮಸ್ಯೆ, ಶಾಲೆಗಳ ಕಟ್ಟಡ, ಶಿಕ್ಷಕರ ಕೊರತೆ, ಅಂಗನವಾಡಿ ಸೌಲಭ್ಯ ಸಮಸ್ಯೆ, ತೋಟಗಾರಿಕೆ, ಕೃಷಿ, ನೀರಾವರಿ ಇಲಾಖೆ ಸಮಸ್ಯೆಯನ್ನು ಶಾಸಕರ ಜತೆ ಹಂಚಿಕೊಂಡರು.</p>.<p>ಪಂಚಾಯಿತಿ ವ್ಯಾಪ್ತಿಯಲ್ಲಿ ಅಭಿವೃದ್ಧಿ ಕಾರ್ಯ ನಡೆಯುತ್ತಿಲ್ಲ ಎಂದು ಆರೋಪಗಳು ಬಂದವು. ಇದಕ್ಕೆ ಶಾಸಕ ಯೋಗೇಶ್ವರ್ ಕುಪಿತರಾಗಿ, ಸ್ಥಳದಲ್ಲಿ ಇದ್ದ ಗ್ರಾ.ಪಂ. ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದರು. <br /> ತಾ.ಪಂ ಇ.ಒ ಸಂದೀಪ್, ಕಾವೇರಿ ನೀರಾವರಿ ನಿಗಮದ ಎಇಇ ಸುರೇಶ್, ಕೃಷಿ ಇಲಾಖೆ ಸಹಾಯಕ ನಿರ್ದೇಶಕಿ ಅಪರ್ಣಾ, ಸಿ.ಡಿ.ಪಿ.ಒ ಪ್ರಮೀಳಾ, ಜಲಜೀವನ್ ಮಿಷನ್ ಎಂಜಿನಿಯರ್ ಮಧು, ಗ್ರಾ.ಪಂ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಸ್ಥಳೀಯ ಮುಖಂಡರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>