<p><strong>ಚನ್ನಪಟ್ಟಣ</strong>: ಶಾಸಕ ಸಿ.ಪಿ.ಯೋಗೇಶ್ವರ್ ಅವರ ಆಪ್ತ ಸಹಾಯಕ ರಮೇಶ್ ಮತ್ತು ಕಾಂಗ್ರೆಸ್ ಮುಖಂಡ ಇಗ್ಗಲೂರು ಕುಮಾರ್ ಅವರು ಮೊಬೈಲ್ ಕರೆಯಲ್ಲಿ ಪರಸ್ಪರ ಬೈದಾಡಿಕೊಂಡಿದ್ದು, ಈ ಆಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.</p>.<p>ಇಗ್ಗಲೂರು ಕುಮಾರ್ ತಮ್ಮ ಸಂಬಂಧಿಕರೊಬ್ಬರ ಆರೋಗ್ಯ ಸಮಸ್ಯೆಗೆ ಶಾಸಕರ ಆಪ್ತ ಸಹಾಯಕರು ಸೂಕ್ತವಾಗಿ ಸ್ಪಂದಿಸುತ್ತಿಲ್ಲ ಎಂದು ಆರೋಪ ಮಾಡಿದ್ದರು. ಈ ವಿಚಾರದ ಬಗ್ಗೆ ವಿವರಣೆ ಪಡೆಯಲು ರಮೇಶ್, ಕುಮಾರ್ಗೆ ಕರೆ ಮಾಡಿ ಪ್ರಶ್ನಿಸಿದ್ದಾರೆ. ಆಗ ಕುಮಾರ್, ರಮೇಶ್ ವಿರುದ್ಧ ಹರಿಹಾಯ್ದಿದ್ದಾರೆ. ಇದರಿಂದ ಏಕಾಏಕಿ ರಮೇಶ್ ಕೂಡ ಗರಂ ಆಗಿದ್ದಾರೆ.</p>.<p>ಇಬ್ಬರ ನಡುವಿನ ಮೊಬೈಲ್ ಸಂಭಾಷಣೆ ವೇಳೆ ವಾಗ್ವಾದ ನಡೆದಿದೆ. ರಮೇಶ್ ಅವಾಚ್ಯ ಶಬ್ದಗಳಿಂದ ಇಗ್ಗಲೂರು ಕುಮಾರ್ ಅವರನ್ನು ನಿಂದಿಸಿದ್ದಾರೆ. ನಂತರ ಪರಸ್ಪರ ಬೈದಾಡಿಕೊಂಡ ಇಗ್ಗಲೂರು ಕುಮಾರ್, ಈ ವಿಚಾರವನ್ನು ಯೋಗೇಶ್ವರ್ಗೆ ಹೇಳುತ್ತೇನೆ. ‘ನೀನೊಬ್ಬ 420 ಎಂದು ಗರಂ ಆಗಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ರಮೇಶ್, ನನ್ನ ಇನ್ನೊಂದು ಮುಖ ನೋಡಿಲ್ಲ ನೀನು’ ಎಂದು ಬೆದರಿಕೆ ಹಾಕಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚನ್ನಪಟ್ಟಣ</strong>: ಶಾಸಕ ಸಿ.ಪಿ.ಯೋಗೇಶ್ವರ್ ಅವರ ಆಪ್ತ ಸಹಾಯಕ ರಮೇಶ್ ಮತ್ತು ಕಾಂಗ್ರೆಸ್ ಮುಖಂಡ ಇಗ್ಗಲೂರು ಕುಮಾರ್ ಅವರು ಮೊಬೈಲ್ ಕರೆಯಲ್ಲಿ ಪರಸ್ಪರ ಬೈದಾಡಿಕೊಂಡಿದ್ದು, ಈ ಆಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.</p>.<p>ಇಗ್ಗಲೂರು ಕುಮಾರ್ ತಮ್ಮ ಸಂಬಂಧಿಕರೊಬ್ಬರ ಆರೋಗ್ಯ ಸಮಸ್ಯೆಗೆ ಶಾಸಕರ ಆಪ್ತ ಸಹಾಯಕರು ಸೂಕ್ತವಾಗಿ ಸ್ಪಂದಿಸುತ್ತಿಲ್ಲ ಎಂದು ಆರೋಪ ಮಾಡಿದ್ದರು. ಈ ವಿಚಾರದ ಬಗ್ಗೆ ವಿವರಣೆ ಪಡೆಯಲು ರಮೇಶ್, ಕುಮಾರ್ಗೆ ಕರೆ ಮಾಡಿ ಪ್ರಶ್ನಿಸಿದ್ದಾರೆ. ಆಗ ಕುಮಾರ್, ರಮೇಶ್ ವಿರುದ್ಧ ಹರಿಹಾಯ್ದಿದ್ದಾರೆ. ಇದರಿಂದ ಏಕಾಏಕಿ ರಮೇಶ್ ಕೂಡ ಗರಂ ಆಗಿದ್ದಾರೆ.</p>.<p>ಇಬ್ಬರ ನಡುವಿನ ಮೊಬೈಲ್ ಸಂಭಾಷಣೆ ವೇಳೆ ವಾಗ್ವಾದ ನಡೆದಿದೆ. ರಮೇಶ್ ಅವಾಚ್ಯ ಶಬ್ದಗಳಿಂದ ಇಗ್ಗಲೂರು ಕುಮಾರ್ ಅವರನ್ನು ನಿಂದಿಸಿದ್ದಾರೆ. ನಂತರ ಪರಸ್ಪರ ಬೈದಾಡಿಕೊಂಡ ಇಗ್ಗಲೂರು ಕುಮಾರ್, ಈ ವಿಚಾರವನ್ನು ಯೋಗೇಶ್ವರ್ಗೆ ಹೇಳುತ್ತೇನೆ. ‘ನೀನೊಬ್ಬ 420 ಎಂದು ಗರಂ ಆಗಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ರಮೇಶ್, ನನ್ನ ಇನ್ನೊಂದು ಮುಖ ನೋಡಿಲ್ಲ ನೀನು’ ಎಂದು ಬೆದರಿಕೆ ಹಾಕಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>