'ಯೋಗೇಶ್ವರ್ ಕಾಂಗ್ರೆಸ್ ಸೇರಲು ಉತ್ಸುಕರಾಗಿದ್ದು, ನನ್ನ ಸಂಪರ್ಕದಲ್ಲಿ ಇದ್ದರು. ಹದಿನೈದು ದಿನದ ಹಿಂದೆ ನನ್ನ ಕಾಲು ಹಿಡಿಯಲು ಬಂದಿದ್ದರು’ ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿಕೆಗೆ ಫೇಸ್ಬುಕ್ ಖಾತೆ ಮೂಲಕ ಸ್ಪಷ್ಟನೆ ನೀಡಿರುವ ಯೋಗೇಶ್ವರ್ 'ಅವರ ಹೇಳಿಕೆ ಸಂಪೂರ್ಣ ಸುಳ್ಳು. ನಾನು ಅವರನ್ನು ಭೇಟಿ ಮಾಡಿಲ್ಲ. ಬಿಜೆಪಿಯಲ್ಲಿ ನನಗೆ ಎಲ್ಲವೂ ಸಿಗುತ್ತಿದ್ದು, ಪಕ್ಷ ಬಿಡುವ ಪ್ರಶ್ನೆಯೇ ಇಲ್ಲ’ ಎಂದಿದ್ದಾರೆ.