2019ರ ಲೋಕಸಭಾ ಚುನಾವಣೆಯಲ್ಲಿ ನಾನು ಬಿಜೆಪಿಯಿಂದ ಸ್ಪರ್ಧಿಸಿದ್ದರೆ ಡಿ.ಕೆ. ಸುರೇಶ್ ಸಂಸದರಾಗುತ್ತಿರಲಿಲ್ಲ. ಆಗಲೆ ಸುರೇಶ್ ಅವರನ್ನು ಮನೆಗೆ ಕಳುಹಿಸುತ್ತಿದ್ದೆ. ಅಂದು ಅವರಿಗೆ ಅದೇ ನಾನು ಮಾಡಿದ ಸಹಕಾರ ಎಂದರು.
ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಎ.ಮಂಜುನಾಥ್, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಆನಂದಸ್ವಾಮಿ, ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷ ಎಚ್.ಸಿ. ಜಯಮುತ್ತು, ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಕುಕ್ಕುರುದೊಡ್ಡಿ ಜಯರಾಮ್, ಪಿಎಲ್.ಡಿ. ಬ್ಯಾಂಕ್ ಅಧ್ಯಕ್ಷ ಗೋವಿಂದಹಳ್ಳಿ ನಾಗರಾಜು, ಹಾಪ್ ಕಾಮ್ಸ್ ದೇವರಾಜು, ಪಂಚಮಿ ಪ್ರಸನ್ನ, ಅಜಯ್, ತೂಬಿನಕೆರೆ ರಾಜು, ಶಿವು, ಮುದ್ದುಕೃಷ್ಣ, ವಿ.ಬಿ.ಚಂದ್ರು, ಜಯರಾಂ, ಇತರರು ಹಾಜರಿದ್ದರು.
ಮೈತ್ರಿ ಸಮ್ಮಿಲನ ಕಾರ್ಯಕ್ರಮ ರದ್ದು: ನಗರದ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಮಂಗಳವಾರ (ಮಾರ್ಚ್ 19) ನಡೆಯಬೇಕಿದ್ದ ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿ ಸಮ್ಮಿಲನ ಕಾರ್ಯಕ್ರಮ ಮುಂದೂಡಿರುವುದಾಗಿ ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷ ಜಯಮುತ್ತು ತಿಳಿಸಿದ್ದಾರೆ.
ಮಂಗಳವಾರ ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿ ಸಮ್ಮಿಲನ ಕಾರ್ಯಕ್ರಮ ನಡೆಸಲು ತೀರ್ಮಾನಿಸಲಾಗಿತ್ತು. ಆದರೆ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಅನಾರೋಗ್ಯದ ಕಾರಣ ಸಮಾವೇಶ ಮುಂದೂಡಲಾಗಿದೆ. ಮುಂದಿನ ದಿನಗಳಲ್ಲಿ ಕಾರ್ಯಕ್ರಮ ನಡೆಸಲಾಗುವುದು. ಈ ಬಗ್ಗೆ ದಿನಾಂಕ ನಿಗದಿಪಡಿಸಲಾಗುವುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.