<p><strong>ರಾಮನಗರ</strong>: <strong>ರಾಮನಗರ</strong>ಜಿಲ್ಲೆಯಲ್ಲಿ ಕುಮಾರಸ್ವಾಮಿ ಕುಟುಂಬದ ವಂಶಪಾರಂಪರ್ಯ ರಾಜಕಾರಣಕ್ಕೆ ಮುಂದಿನ ಚುನಾವಣೆಯಲ್ಲಿ ಜನತೆ ಅಂತ್ಯ ಹಾಡಲಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಪಿ. ಯೋಗೇಶ್ವರ್ ಹೇಳಿದರು.</p>.<p>ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ' ಕ್ಷೇತ್ರದಲ್ಲಿ ₹1,500 ಕೋಟಿ ಅನುದಾನ ತಂದಿರುವುದಾಗಿ ಕುಮಾರಸ್ವಾಮಿ ಹೇಳಿದ್ದು, ಈ ಎಲ್ಲ ಕಾಮಗಾರಿಯನ್ನು ಬೇನಾಮಿ ಹೆಸರಿನಲ್ಲಿ ತಾವೇ ನಡೆಸಿದ್ದಾರೆ. ಗುತ್ತಿಗೆದಾರರಿಂದ ದಂದೆ ನಡೆಸಿ, ಆ ಪಾಪದ ಹಣವನ್ನು ಹೆಲಿಕಾಪ್ಟರ್ ನಲ್ಲಿ ಹೂವಿನ ರೂಪದಲ್ಲಿ ಚೆಲ್ಲಿಸಿಕೊಳ್ಳುತ್ತಿದ್ದಾರೆ' ಎಂದು ಲೇವಡಿ ಮಾಡಿದರು.</p>.<p>ಕುಮಾರಸ್ವಾಮಿ ಬಗ್ಗೆ ಬಿ.ಎಲ್. ಸಂತೋಷ್ ಹೇಳಿಕೆ ಸರಿಯಾಗಿಯೇ ಇದೆ. ಸಂತೋಷ್ ಜೀ ಅವರ ಬಗ್ಗೆ ವೈಯಕ್ತಿಕ ಟೀಕೆ ಸರಿಯಲ್ಲ. ಅವರು ನಮ್ಮ ನಾಯಕರು ಎಂದರು.</p>.<p>ಸ್ತ್ರೀಶಕ್ತಿ ಸಂಘಗಳ ಸಾಲ ಮನ್ನಾ ವಿಚಾರದಲ್ಲಿ ಜೆಡಿಎಸ್ ಜನರ ದಿಕ್ಕು ತಪ್ಪಿಸುತ್ತಿದೆ. ಕಳೆದ ಬಾರಿಯೂ ಇವರ ಮಾತು ನಂಬಿಕೊಂಡು ಜನರ ಆಸ್ತಿ ಹರಾಜಾಯಿತು ಎಂದು ಟೀಕಿಸಿದರು.</p>.<p>ಬಿಜೆಪಿ ಅಲ್ಪಸಂಖ್ಯಾತರ ವಿರೋಧಿ ಅಲ್ಲ. ಮೇಘಾಲಯದಲ್ಲಿ ಶೇ 90ರಷ್ಟು ಕ್ರಿಶ್ಚಿಯನ್ನರೇ ಇದ್ದರೂ ನಮ್ಮ ಪಕ್ಷವೇ ಆಡಳಿತದಲ್ಲಿದೆ ಎಂದರು.</p>.<p><strong>ಪಕ್ಷ ಬಿಡಲ್ಲ</strong></p>.<p>ಬಿಜೆಪಿಯೇ ನನ್ನ ಮಾತೃ ಪಕ್ಷ. ಚನ್ನಪಟ್ಟಣದಲ್ಲಿ ಅಭಿವೃದ್ದಿ ಆಗಿದೆ, ನನಗೂ ಹೆಸರು ಬಂದಿದೆ ಎಂದರೆ ಅದಕ್ಕೆ ಬಿಜೆಪಿಯೇ ಕಾರಣ. ಅದೇ ಪಕ್ಷದಿಂದಲೇ ಚುನಾವಣೆ ಎದುರಿಸುತ್ತೇನೆ. ಸದ್ಯ ಸಚಿವ ಸ್ಥಾನದ ಕುರಿತು ಯಾವುದೇ ನಿರೀಕ್ಷೆ ಇಟ್ಟುಕೊಂಡಿಲ್ಲ ಎಂದರು.</p>.<p>ಶಾಸಕರಿಗೆ ಹಣದ ಆಮಿಷ ಕುರಿತು ಎಚ್. ವಿಶ್ವನಾಥ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದ ಸಿಪಿವೈ, ಈಗ 2023ರ ಚುನಾವಣೆ ಬಂತು. ಆ ಬಗ್ಗೆ ಮಾತನಾಡುವುದು ಅಪ್ರಸ್ತುತ ಎಂದಷ್ಟೇ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಮನಗರ</strong>: <strong>ರಾಮನಗರ</strong>ಜಿಲ್ಲೆಯಲ್ಲಿ ಕುಮಾರಸ್ವಾಮಿ ಕುಟುಂಬದ ವಂಶಪಾರಂಪರ್ಯ ರಾಜಕಾರಣಕ್ಕೆ ಮುಂದಿನ ಚುನಾವಣೆಯಲ್ಲಿ ಜನತೆ ಅಂತ್ಯ ಹಾಡಲಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಪಿ. ಯೋಗೇಶ್ವರ್ ಹೇಳಿದರು.</p>.<p>ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ' ಕ್ಷೇತ್ರದಲ್ಲಿ ₹1,500 ಕೋಟಿ ಅನುದಾನ ತಂದಿರುವುದಾಗಿ ಕುಮಾರಸ್ವಾಮಿ ಹೇಳಿದ್ದು, ಈ ಎಲ್ಲ ಕಾಮಗಾರಿಯನ್ನು ಬೇನಾಮಿ ಹೆಸರಿನಲ್ಲಿ ತಾವೇ ನಡೆಸಿದ್ದಾರೆ. ಗುತ್ತಿಗೆದಾರರಿಂದ ದಂದೆ ನಡೆಸಿ, ಆ ಪಾಪದ ಹಣವನ್ನು ಹೆಲಿಕಾಪ್ಟರ್ ನಲ್ಲಿ ಹೂವಿನ ರೂಪದಲ್ಲಿ ಚೆಲ್ಲಿಸಿಕೊಳ್ಳುತ್ತಿದ್ದಾರೆ' ಎಂದು ಲೇವಡಿ ಮಾಡಿದರು.</p>.<p>ಕುಮಾರಸ್ವಾಮಿ ಬಗ್ಗೆ ಬಿ.ಎಲ್. ಸಂತೋಷ್ ಹೇಳಿಕೆ ಸರಿಯಾಗಿಯೇ ಇದೆ. ಸಂತೋಷ್ ಜೀ ಅವರ ಬಗ್ಗೆ ವೈಯಕ್ತಿಕ ಟೀಕೆ ಸರಿಯಲ್ಲ. ಅವರು ನಮ್ಮ ನಾಯಕರು ಎಂದರು.</p>.<p>ಸ್ತ್ರೀಶಕ್ತಿ ಸಂಘಗಳ ಸಾಲ ಮನ್ನಾ ವಿಚಾರದಲ್ಲಿ ಜೆಡಿಎಸ್ ಜನರ ದಿಕ್ಕು ತಪ್ಪಿಸುತ್ತಿದೆ. ಕಳೆದ ಬಾರಿಯೂ ಇವರ ಮಾತು ನಂಬಿಕೊಂಡು ಜನರ ಆಸ್ತಿ ಹರಾಜಾಯಿತು ಎಂದು ಟೀಕಿಸಿದರು.</p>.<p>ಬಿಜೆಪಿ ಅಲ್ಪಸಂಖ್ಯಾತರ ವಿರೋಧಿ ಅಲ್ಲ. ಮೇಘಾಲಯದಲ್ಲಿ ಶೇ 90ರಷ್ಟು ಕ್ರಿಶ್ಚಿಯನ್ನರೇ ಇದ್ದರೂ ನಮ್ಮ ಪಕ್ಷವೇ ಆಡಳಿತದಲ್ಲಿದೆ ಎಂದರು.</p>.<p><strong>ಪಕ್ಷ ಬಿಡಲ್ಲ</strong></p>.<p>ಬಿಜೆಪಿಯೇ ನನ್ನ ಮಾತೃ ಪಕ್ಷ. ಚನ್ನಪಟ್ಟಣದಲ್ಲಿ ಅಭಿವೃದ್ದಿ ಆಗಿದೆ, ನನಗೂ ಹೆಸರು ಬಂದಿದೆ ಎಂದರೆ ಅದಕ್ಕೆ ಬಿಜೆಪಿಯೇ ಕಾರಣ. ಅದೇ ಪಕ್ಷದಿಂದಲೇ ಚುನಾವಣೆ ಎದುರಿಸುತ್ತೇನೆ. ಸದ್ಯ ಸಚಿವ ಸ್ಥಾನದ ಕುರಿತು ಯಾವುದೇ ನಿರೀಕ್ಷೆ ಇಟ್ಟುಕೊಂಡಿಲ್ಲ ಎಂದರು.</p>.<p>ಶಾಸಕರಿಗೆ ಹಣದ ಆಮಿಷ ಕುರಿತು ಎಚ್. ವಿಶ್ವನಾಥ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದ ಸಿಪಿವೈ, ಈಗ 2023ರ ಚುನಾವಣೆ ಬಂತು. ಆ ಬಗ್ಗೆ ಮಾತನಾಡುವುದು ಅಪ್ರಸ್ತುತ ಎಂದಷ್ಟೇ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>