<p><strong>ಚನ್ನಪಟ್ಟಣ</strong>: ಕಳಪೆ ಕಾಮಗಾರಿ ನಡೆಸಿದ ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಲಾಗುವುದು ಎಂದು ಶಾಸಕ ಸಿ.ಪಿ. ಯೋಗೇಶ್ವರ್ ಹೇಳಿದರು.</p>.<p>ಬುಧವಾರ ತಾಲ್ಲೂಕಿನ ಬೈರಾಪಟ್ಟಣ ಗ್ರಾಮದಲ್ಲಿ ಶಾಲಾ ಕಟ್ಟಡಗಳ ಉದ್ಘಾಟನೆ ಮಾಡಿ, ನಗರದ ಸೈಯದ್ ವಾಡಿ, ಮದೀನಾ ಚೌಕ, ನಿಜಾಮಿ ಚೌಕ, ಮೆಹದಿನಗರ, ಕನಕನಗರದ ಬೀರೇಶ್ವರ ದೇವಸ್ಥಾನ ಸೇರಿದಂತೆ ವಿವಧೆಡೆ ಸಿಸಿ ರಸ್ತೆ, ಸಿಸಿ ಚರಂಡಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದರು.</p>.<p>ಬೈರಾಪಟ್ಟಣ ಶಾಲಾ ಕಟ್ಟಡ ನಿರ್ಮಾಣದಲ್ಲಿ ಕಳಪೆ ಕಾಮಗಾರಿ ನಡೆಸಲಾಗಿದೆ ಎಂದು ಗ್ರಾಮಸ್ಥರು ದೂರುತ್ತಿದ್ದಾರೆ. ಈಗಾಗಲೇ ಗುತ್ತಿಗೆದಾರ ಕಾಮಗಾರಿಯ ಬಿಲ್ ಪಡೆದಿದ್ದಾರೆ. ಈ ಬಗ್ಗೆ ತನಿಖೆ ನಡೆಸಲು ಸೂಚಿಸಲಾಗುವುದು. ಕಳಪೆ ಕಾಮಗಾರಿ ಸಾಬೀತಾದಾರೆ ಆ ಗುತ್ತಿಗೆದಾರನನ್ನು ಕಪ್ಪುಪಟ್ಟಿಗೆ ಸೇರಿಸಲು ಕ್ರಮ ವಹಿಸಲಾಗುವುದು ಎಂದು ಯೋಗೇಶ್ವರ್ ತಿಳಿಸಿದರು.</p>.<p>ನಗರದ 31 ವಾರ್ಡ್ಗಳಲ್ಲಿಯೂ ಕನಿಷ್ಠ ₹1 ಕೋಟಿ ವೆಚ್ಚದಲ್ಲಿ ಹಲವು ಕಾಮಗಾರಿಗಳಿಗೆ ಚಾಲನೆ ನೀಡಲಾಗುತ್ತಿದೆ. ಹಲವು ವಾರ್ಡ್ಗಳಲ್ಲಿ ಕಾಮಗಾರಿಗಳು ಬಹುತೇಕ ಪೂರ್ಣಗೊಂಡಿವೆ. ಅದರಂತೆ ಎಲ್ಲಾ ವಾರ್ಡ್ಗಳಲ್ಲಿಯೂ ಕಾಮಗಾರಿಗಳನ್ನು ಪೂರ್ಣಗೊಳಿಸಿ ಸಾರ್ವಜನಿಕರಿಗೆ ಅರ್ಪಿಸಲಾಗುವುದು ಎಂದು ತಿಳಿಸಿದರು.</p>.<p>‘ನಗರ ಹಾಗೂ ಗ್ರಾಮೀಣ ಪ್ರದೇಶದ ಮೂಲ ಸೌಕರ್ಯಗಳನ್ನು ಅಭಿವೃದ್ಧಿಪಡಿಸುವುದು ಮೊದಲ ಆದ್ಯತೆಯಾಗಿದೆ. ಜನರ ಸಹಕಾರದಿಂದ ಚನ್ನಪಟ್ಟಣ ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಶ್ರಮಿಸುತ್ತೇನೆ’ ಎಂದರು.</p>.<p>ನಗರಸಭೆ ಆವರಣದಲ್ಲಿ ನೂತನವಾಗಿ ಖರೀದಿಸಿದ ಜೆಸಿಬಿ, 6 ಕಸ ಸಂಗ್ರಹಣೆ ವಾಹನಗಳಿಗೆ ಯೋಗೇಶ್ವರ್ ಚಾಲನೆ ನೀಡಿದರು.</p>.<p>ನಗರಸಭೆ ಅಧ್ಯಕ್ಷ ನಾಗೇಶ್, ಉಪಾಧ್ಯಕ್ಷ ಉಮೇಶ್, ಸ್ಥಾಯಿ ಸಮಿತಿ ಅಧ್ಯಕ್ಷ ಚಂದ್ರಶೇಖರ್, ಸದಸ್ಯ ವಾಸಿಲ್ ಆಲಿಖಾನ್, ಬೈರಾಪಟ್ಟಣ ಶಾಲೆ ಎಸ್ ಡಿಎಂಸಿ ಅಧ್ಯಕ್ಷ ಕೃಷ್ಣೇಗೌಡ, ಬಿಇಒ ರಾಮಲಿಂಗಯ್ಯ, ಬಿಆರ್ಸಿ ರಾಜಶೇಖರ್, ನಿವೃತ್ತ ಶಿಕ್ಷಕ ಬಿ.ಆರ್. ಹರಿದಾಸ್, ನಗರಸಭೆ ಆಯುಕ್ತ ಮಹೇಂದ್ರ, ಸದಸ್ಯೆ ಮಂಗಳಮ್ಮ, ಮುಖಂಡರಾದ ಶಿವು, ಶರತ್, ಬಾವಸಾ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚನ್ನಪಟ್ಟಣ</strong>: ಕಳಪೆ ಕಾಮಗಾರಿ ನಡೆಸಿದ ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಲಾಗುವುದು ಎಂದು ಶಾಸಕ ಸಿ.ಪಿ. ಯೋಗೇಶ್ವರ್ ಹೇಳಿದರು.</p>.<p>ಬುಧವಾರ ತಾಲ್ಲೂಕಿನ ಬೈರಾಪಟ್ಟಣ ಗ್ರಾಮದಲ್ಲಿ ಶಾಲಾ ಕಟ್ಟಡಗಳ ಉದ್ಘಾಟನೆ ಮಾಡಿ, ನಗರದ ಸೈಯದ್ ವಾಡಿ, ಮದೀನಾ ಚೌಕ, ನಿಜಾಮಿ ಚೌಕ, ಮೆಹದಿನಗರ, ಕನಕನಗರದ ಬೀರೇಶ್ವರ ದೇವಸ್ಥಾನ ಸೇರಿದಂತೆ ವಿವಧೆಡೆ ಸಿಸಿ ರಸ್ತೆ, ಸಿಸಿ ಚರಂಡಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದರು.</p>.<p>ಬೈರಾಪಟ್ಟಣ ಶಾಲಾ ಕಟ್ಟಡ ನಿರ್ಮಾಣದಲ್ಲಿ ಕಳಪೆ ಕಾಮಗಾರಿ ನಡೆಸಲಾಗಿದೆ ಎಂದು ಗ್ರಾಮಸ್ಥರು ದೂರುತ್ತಿದ್ದಾರೆ. ಈಗಾಗಲೇ ಗುತ್ತಿಗೆದಾರ ಕಾಮಗಾರಿಯ ಬಿಲ್ ಪಡೆದಿದ್ದಾರೆ. ಈ ಬಗ್ಗೆ ತನಿಖೆ ನಡೆಸಲು ಸೂಚಿಸಲಾಗುವುದು. ಕಳಪೆ ಕಾಮಗಾರಿ ಸಾಬೀತಾದಾರೆ ಆ ಗುತ್ತಿಗೆದಾರನನ್ನು ಕಪ್ಪುಪಟ್ಟಿಗೆ ಸೇರಿಸಲು ಕ್ರಮ ವಹಿಸಲಾಗುವುದು ಎಂದು ಯೋಗೇಶ್ವರ್ ತಿಳಿಸಿದರು.</p>.<p>ನಗರದ 31 ವಾರ್ಡ್ಗಳಲ್ಲಿಯೂ ಕನಿಷ್ಠ ₹1 ಕೋಟಿ ವೆಚ್ಚದಲ್ಲಿ ಹಲವು ಕಾಮಗಾರಿಗಳಿಗೆ ಚಾಲನೆ ನೀಡಲಾಗುತ್ತಿದೆ. ಹಲವು ವಾರ್ಡ್ಗಳಲ್ಲಿ ಕಾಮಗಾರಿಗಳು ಬಹುತೇಕ ಪೂರ್ಣಗೊಂಡಿವೆ. ಅದರಂತೆ ಎಲ್ಲಾ ವಾರ್ಡ್ಗಳಲ್ಲಿಯೂ ಕಾಮಗಾರಿಗಳನ್ನು ಪೂರ್ಣಗೊಳಿಸಿ ಸಾರ್ವಜನಿಕರಿಗೆ ಅರ್ಪಿಸಲಾಗುವುದು ಎಂದು ತಿಳಿಸಿದರು.</p>.<p>‘ನಗರ ಹಾಗೂ ಗ್ರಾಮೀಣ ಪ್ರದೇಶದ ಮೂಲ ಸೌಕರ್ಯಗಳನ್ನು ಅಭಿವೃದ್ಧಿಪಡಿಸುವುದು ಮೊದಲ ಆದ್ಯತೆಯಾಗಿದೆ. ಜನರ ಸಹಕಾರದಿಂದ ಚನ್ನಪಟ್ಟಣ ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಶ್ರಮಿಸುತ್ತೇನೆ’ ಎಂದರು.</p>.<p>ನಗರಸಭೆ ಆವರಣದಲ್ಲಿ ನೂತನವಾಗಿ ಖರೀದಿಸಿದ ಜೆಸಿಬಿ, 6 ಕಸ ಸಂಗ್ರಹಣೆ ವಾಹನಗಳಿಗೆ ಯೋಗೇಶ್ವರ್ ಚಾಲನೆ ನೀಡಿದರು.</p>.<p>ನಗರಸಭೆ ಅಧ್ಯಕ್ಷ ನಾಗೇಶ್, ಉಪಾಧ್ಯಕ್ಷ ಉಮೇಶ್, ಸ್ಥಾಯಿ ಸಮಿತಿ ಅಧ್ಯಕ್ಷ ಚಂದ್ರಶೇಖರ್, ಸದಸ್ಯ ವಾಸಿಲ್ ಆಲಿಖಾನ್, ಬೈರಾಪಟ್ಟಣ ಶಾಲೆ ಎಸ್ ಡಿಎಂಸಿ ಅಧ್ಯಕ್ಷ ಕೃಷ್ಣೇಗೌಡ, ಬಿಇಒ ರಾಮಲಿಂಗಯ್ಯ, ಬಿಆರ್ಸಿ ರಾಜಶೇಖರ್, ನಿವೃತ್ತ ಶಿಕ್ಷಕ ಬಿ.ಆರ್. ಹರಿದಾಸ್, ನಗರಸಭೆ ಆಯುಕ್ತ ಮಹೇಂದ್ರ, ಸದಸ್ಯೆ ಮಂಗಳಮ್ಮ, ಮುಖಂಡರಾದ ಶಿವು, ಶರತ್, ಬಾವಸಾ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>