ಯೋಗೇಶ್ವರ್ರ ಗಣವೇಷದ ಕುರಿತು ಚರ್ಚೆ ನಡೆದಿದೆ. ಇದು ದೇಶಾಭಿಮಾನದ ಪ್ರತೀಕ ಎಂದು ಸಿಪಿವೈ ಅಭಿಮಾನಿಗಳು ಪೋಸ್ಟ್ ಹಾಕಿದ್ದಾರೆ. ಇದಕ್ಕೆ ಅವರ ಕಾಲೆಳೆದಿರುವ ಡಿಕೆಶಿ ಬೆಂಬಲಿಗರು, ಆಗೆಲ್ಲ ಇಲ್ಲದ ಅಭಿಮಾನ ಈಗ ದಿಢೀರ್ ಜಾಗೃತವಾಗಿದ್ದು ಏಕೆ ಎಂದು ಪ್ರಶ್ನಿಸಿದ್ದಾರೆ. ಇದಕ್ಕೆ ಮರು ಉತ್ತರ ನೀಡಿರುವ ಸಿಪಿವೈ ಬೆಂಬಲಿಗರು ‘ಡಿಕೆಶಿಗೆ ದಿಢೀರ್ ಎಂದು ಯೇಸುವಿನ ಕನವರಿಕೆ ಆಗಿದ್ದು ಏಕೆ’ ಎಂದು ಪ್ರಶ್ನಿಸಿದ್ದಾರೆ.