ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಹುಲುವಾಡಿ ದೇವರಾಜು ಅವರು ಜಿಲ್ಲಾ ಅಧ್ಯಕ್ಷರಾಗಿ ನೇಮಕ ಆದ ನಂತರ ಇಡೀ ಪಕ್ಷ ಸಂಘಟನೆಗೆ ಪೆಟ್ಟು ಬಿದ್ದಿದೆ. ಹಲವಾರು ವರ್ಷಗಳಿಂದ ಪಕ್ಷದ ಬಾವುಟ ಕಟ್ಟಿ ಕ್ರಿಯಾಶೀಲರಾಗಿ ಸಂಘಟನೆ ಮಾಡಿರುವ ನಿಷ್ಠಾವಂತ ಕಾರ್ಯಕರ್ತರನ್ನು ಕಡೆಗಣಿಸಿದ್ದಾರೆ. ಕಾರ್ಯಕರ್ತರನ್ನು ಬಣಗಳ ಹೆಸರಿನಲ್ಲಿ ಬೇರ್ಪಡಿಸಿದ್ದು, ಯಾರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲ. ಕೆಆರ್ಡಿಐಎಲ್ ನಿಗಮದ ಅಧ್ಯಕ್ಷ ಎಂ. ರುದ್ರೇಶ್ ಅವರ ಅಭಿಮಾನಿಗಳನ್ನು ವಿರೋಧಿಗಳಂತೆ ಕಾಣುತ್ತಿದ್ದಾರೆ ಎಂದು ಆರೋಪಿಸಿದರು.