ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳೆ ಸಮೀಕ್ಷೆ ಕಾರ್ಯಕ್ಕೆ ಸಿದ್ಧತೆ; ಮೊಬೈಲ್‌ ತಂತ್ರಾಂಶ ಬಳಸಿ ಸರ್ವೆ

ಕೃಷಿ–ಕಂದಾಯ ಇಲಾಖೆ ಸಿಬ್ಬಂದಿ ಭಾಗಿ
Last Updated 28 ಆಗಸ್ಟ್ 2019, 13:54 IST
ಅಕ್ಷರ ಗಾತ್ರ

ರಾಮನಗರ: ಜಿಲ್ಲೆಯಲ್ಲಿನ 817 ಗ್ರಾಮಗಳಲ್ಲಿ ಸೆಪ್ಟೆಂಬರ್‌ 1ರಿಂದ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಕಾರ್ಯವು ಆರಂಭಗೊಳ್ಳಲಿದೆ.

ಕೃಷಿ ಮತ್ತು ಕಂದಾಯ ಇಲಾಖೆಯ ಜಂಟಿ ಸಹಯೋಗದಲ್ಲಿ ಈ ಕಾರ್ಯ ನಡೆಯಲಿದ್ದು, 691 ಸಮೀಕ್ಷೆಗಾರರು ಭಾಗವಹಿಸಲಿದ್ದಾರೆ. ಕಂದಾಯ ಇಲಾಖೆಯ ಗ್ರಾಮ ಲೆಕ್ಕಾಧಿಕಾರಿ ಹಾಗೂ ಸಹಾಯಕರು ಪಾಲ್ಗೊಳ್ಳಲಿದ್ದಾರೆ. ಮೊಬೈಲ್‌ ತಂತ್ರಾಂಶ ಆಧಾರಿತ ಕಾರ್ಯಕ್ರಮ ಇದಾಗಿದೆ.

ಏನು ಪ್ರಯೋಜನ: ಈ ಸಮೀಕ್ಷೆಯನ್ನು ಆಧರಿಸಿಯೇ ಸರ್ಕಾರದಿಂದ ಬೆಳೆ ಹಾನಿ ಪರಿಹಾರ, ಕನಿಷ್ಠ ಬೆಂಬಲ ಬೆಲೆಯಡಿ ಖರೀದಿ, ಬೆಳೆ ವಿಮೆ ಮೊದಲಾದ ಅಂಶಗಳು ನಿರ್ಧಾರ ಆಗಲಿವೆ. ರೈತರು ಖದ್ದು ಸ್ಥಳದಲ್ಲೇ ಇದ್ದು, ಬೆಳೆಯ ನಿಖರ ಮಾಹಿತಿಗಳನ್ನು ಸಮೀಕ್ಷಾ ತಂಡಕ್ಕೆ ನೀಡಬೇಕಿದೆ.

ಪ್ರಸಕ್ತ ಸಾಲಿನಲ್ಲಿ ಎಷ್ಟು ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಬೆಳೆಯಲಾಗಿದೆ. ಯಾವ್ಯಾವ ಬೆಳೆ ಬೆಳೆಯಲಾಗಿದೆ. ಎಷ್ಟು ನಷ್ಟುಗೊಂಡಿದೆ. ಎಷ್ಟು ಮೊತ್ತದ ಪರಿಹಾರ ಬೇಕು. ಜಿಲ್ಲೆಯ ಪ್ರಮುಖ ಬೆಳೆಗಳೇನು? ಮಳೆಯ ಪ್ರಮಾಣ, ಆಗಿರುವ ನಷ್ಟದ ಅಂದಾಜು ಎಲ್ಲವೂ ಈ ಸಮೀಕ್ಷೆ ಮೂಲಕ ತಿಳಿಯಲಿದೆ ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕ ರವಿ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT