<p><strong>ಮಾಗಡಿ</strong>: ತಾಲ್ಲೂಕಿನ ತಿಪ್ಪಸಂದ್ರ ಕರ್ನಾಟಕ ಪಬ್ಲಿಕ್ ಶಾಲೆಯ 1994-95ನೇ ಸಾಲಿನ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ ನಡೆಯಿತು.</p>.<p>ನಿವೃತ್ತ ಮುಖ್ಯೋಪಾಧ್ಯಾಯ ಪಿ.ನಾಗರಾಜು ಮಾತನಾಡಿ, ಪೋಷಕರು ಹಾಗೂ ಗುರುಗಳು ಮಗುವಿನ ಭವಿಷ್ಯ ರೂಪಿಸುವ ರಾಯಭಾರಿಗಳು. ವಿದ್ಯಾರ್ಥಿಗಳು ಸಮಾಜದಲ್ಲಿ ಉನ್ನತ ಹುದ್ದೆಗಳನ್ನು ಅಲಂಕರಿಸಿದರೆ ಅವರಿಗೆ ಆಗುವ ಸಂತೋಷಕ್ಕೆ ಪಾರವೇ ಇಲ್ಲ. ಗುರುವಂದನಾ ಕಾರ್ಯಕ್ರಮಗಳು ಗುರು ಶಿಷ್ಯರ ಸಂಬಂಧ ಗಟ್ಟಿಯಾಗಿಸುತ್ತದೆ ಎಂದರು.</p>.<p>ಮಾಗಡಿಯ ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರಶೇಖರ್ ಮಾತನಾಡಿ, ಶಿಸ್ತು ವಿದ್ಯಾರ್ಥಿಗಳ ಬದುಕಿನ ಸೌಂದರ್ಯವನ್ನು ಹೆಚ್ಚಿಸುತ್ತದೆ. ಸರ್ಕಾರಿ ಶಾಲೆಗಳಲ್ಲಿ ಹಳೆ ವಿದ್ಯಾರ್ಥಿ ಸಂಘ ಕಟ್ಟಿ ಶಾಲೆಗಳ ಶೈಕ್ಷಣಿಕ ಅಭಿವೃದ್ಧಿಗೆ ಹಳೆ ವಿದ್ಯಾರ್ಥಿಗಳು ಶ್ರಮಿಸಬೇಕು ಎಂದು ತಿಳಿಸಿದರು.</p>.<p>ಕಾರ್ಯಕ್ರಮದಲ್ಲಿ ನಿವೃತ್ತ ಶಿಕ್ಷಕರು, ವಿದ್ಯಾರ್ಥಿಗಳು ಶಾಲೆಯಲ್ಲಿ ಪಾಠ ಪ್ರವಚನ ಕೇಳುವ ಅವಿಸ್ಮರಣೀಯ ಘಟನೆಗಳನ್ನು ವಿದ್ಯಾರ್ಥಿಗಳ ಮುಂದೆ ಹಂಚಿಕೊಂಡರು. ಜತೆಗೆ ಹಳೆ ವಿದ್ಯಾರ್ಥಿಗಳು ಶಾಲಾ ದಿನಗಳ ನೆನಪನ್ನು ಮೆಲಕು ಹಾಕಿದರು.</p>.<p>ನಂಜೇಗೌಡ, ಗಂಗಚಿಕ್ಕಯ್ಯ, ಗಿರಿಜಾಂಬ, ಟಿ.ವಿ ಗೋವಿಂದರಾಜು, ಗುರು ನಂಜಯ್ಯ, ರಜನಿ ಶೇಖರ್, ಎಸ್.ಜಿ ಶಂಕರ್, ನಿಂಗಾಚಾರ್, ವನಿತಾ ನಾಯಕ್, ನರಸಮ್ಮ, ರಾಜಣ್ಣ ಅವರನ್ನು ಹಳೆ ವಿದ್ಯಾರ್ಥಿಗಳು ಗೌರವಿಸಿದರು.</p>.<p>ಕಾರ್ಯಕ್ರಮದಲ್ಲಿ ಶಾಲಾ ಕ್ರೀಡಾಪಟುಗಳಿಗೆ ಕ್ರೀಡಾ ಸಮವಸ್ತ್ರ ಹಾಗೂ ನೋಟ್ ಪುಸ್ತಕವನ್ನು ವಿತರಣೆ ಮಾಡಲಾಯಿತು.</p>.<p>ನರಸಿಂಹಮೂರ್ತಿ, ಶಿವಕುಮಾರ್, ಪುಟ್ಟರಾಜು, ಶ್ಯಾಮಲಾ, ಜ್ಞಾನಮೂರ್ತಿ, ರಮೇಶ್, ತಿಪ್ಪಸಂದ್ರ ಸ್ವಾಮಿ ಸೇರಿದಂತೆ ಇತರರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಾಗಡಿ</strong>: ತಾಲ್ಲೂಕಿನ ತಿಪ್ಪಸಂದ್ರ ಕರ್ನಾಟಕ ಪಬ್ಲಿಕ್ ಶಾಲೆಯ 1994-95ನೇ ಸಾಲಿನ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ ನಡೆಯಿತು.</p>.<p>ನಿವೃತ್ತ ಮುಖ್ಯೋಪಾಧ್ಯಾಯ ಪಿ.ನಾಗರಾಜು ಮಾತನಾಡಿ, ಪೋಷಕರು ಹಾಗೂ ಗುರುಗಳು ಮಗುವಿನ ಭವಿಷ್ಯ ರೂಪಿಸುವ ರಾಯಭಾರಿಗಳು. ವಿದ್ಯಾರ್ಥಿಗಳು ಸಮಾಜದಲ್ಲಿ ಉನ್ನತ ಹುದ್ದೆಗಳನ್ನು ಅಲಂಕರಿಸಿದರೆ ಅವರಿಗೆ ಆಗುವ ಸಂತೋಷಕ್ಕೆ ಪಾರವೇ ಇಲ್ಲ. ಗುರುವಂದನಾ ಕಾರ್ಯಕ್ರಮಗಳು ಗುರು ಶಿಷ್ಯರ ಸಂಬಂಧ ಗಟ್ಟಿಯಾಗಿಸುತ್ತದೆ ಎಂದರು.</p>.<p>ಮಾಗಡಿಯ ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರಶೇಖರ್ ಮಾತನಾಡಿ, ಶಿಸ್ತು ವಿದ್ಯಾರ್ಥಿಗಳ ಬದುಕಿನ ಸೌಂದರ್ಯವನ್ನು ಹೆಚ್ಚಿಸುತ್ತದೆ. ಸರ್ಕಾರಿ ಶಾಲೆಗಳಲ್ಲಿ ಹಳೆ ವಿದ್ಯಾರ್ಥಿ ಸಂಘ ಕಟ್ಟಿ ಶಾಲೆಗಳ ಶೈಕ್ಷಣಿಕ ಅಭಿವೃದ್ಧಿಗೆ ಹಳೆ ವಿದ್ಯಾರ್ಥಿಗಳು ಶ್ರಮಿಸಬೇಕು ಎಂದು ತಿಳಿಸಿದರು.</p>.<p>ಕಾರ್ಯಕ್ರಮದಲ್ಲಿ ನಿವೃತ್ತ ಶಿಕ್ಷಕರು, ವಿದ್ಯಾರ್ಥಿಗಳು ಶಾಲೆಯಲ್ಲಿ ಪಾಠ ಪ್ರವಚನ ಕೇಳುವ ಅವಿಸ್ಮರಣೀಯ ಘಟನೆಗಳನ್ನು ವಿದ್ಯಾರ್ಥಿಗಳ ಮುಂದೆ ಹಂಚಿಕೊಂಡರು. ಜತೆಗೆ ಹಳೆ ವಿದ್ಯಾರ್ಥಿಗಳು ಶಾಲಾ ದಿನಗಳ ನೆನಪನ್ನು ಮೆಲಕು ಹಾಕಿದರು.</p>.<p>ನಂಜೇಗೌಡ, ಗಂಗಚಿಕ್ಕಯ್ಯ, ಗಿರಿಜಾಂಬ, ಟಿ.ವಿ ಗೋವಿಂದರಾಜು, ಗುರು ನಂಜಯ್ಯ, ರಜನಿ ಶೇಖರ್, ಎಸ್.ಜಿ ಶಂಕರ್, ನಿಂಗಾಚಾರ್, ವನಿತಾ ನಾಯಕ್, ನರಸಮ್ಮ, ರಾಜಣ್ಣ ಅವರನ್ನು ಹಳೆ ವಿದ್ಯಾರ್ಥಿಗಳು ಗೌರವಿಸಿದರು.</p>.<p>ಕಾರ್ಯಕ್ರಮದಲ್ಲಿ ಶಾಲಾ ಕ್ರೀಡಾಪಟುಗಳಿಗೆ ಕ್ರೀಡಾ ಸಮವಸ್ತ್ರ ಹಾಗೂ ನೋಟ್ ಪುಸ್ತಕವನ್ನು ವಿತರಣೆ ಮಾಡಲಾಯಿತು.</p>.<p>ನರಸಿಂಹಮೂರ್ತಿ, ಶಿವಕುಮಾರ್, ಪುಟ್ಟರಾಜು, ಶ್ಯಾಮಲಾ, ಜ್ಞಾನಮೂರ್ತಿ, ರಮೇಶ್, ತಿಪ್ಪಸಂದ್ರ ಸ್ವಾಮಿ ಸೇರಿದಂತೆ ಇತರರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>