ಭಾನುವಾರ, 12 ಅಕ್ಟೋಬರ್ 2025
×
ADVERTISEMENT
ADVERTISEMENT

ಅಂತರ್ಜಾಲ ಬಳಕೆಗೆ ಮಿತಿ ಇರಲಿ: ಹೈಕೋರ್ಟ್ ನ್ಯಾಯಮೂರ್ತಿ ಇ.ಎಸ್. ಇಂದ್ರೇಶ್ ಸಲಹೆ

Published : 12 ಅಕ್ಟೋಬರ್ 2025, 2:28 IST
Last Updated : 12 ಅಕ್ಟೋಬರ್ 2025, 2:28 IST
ಫಾಲೋ ಮಾಡಿ
Comments
ಫೇಸ್‌ಬುಕ್ ವಾಟ್ಸ್‌ಆ್ಯಪ್‌ ಇನ್‌ಸ್ಟಾಗ್ರಾಮ್ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಅಪರಿಚಿತರೊಂದಿಗೆ ವೈಯಕ್ತಿಕ ಮಾಹಿತಿ ಹಂಚಿಕೊಳ್ಳಬಾರದು. ಅಪರಿಚಿತ ಲಿಂಕ್‌ಗಳನ್ನು ಕ್ಲಿಕ್‌ ಮಾಡಬಾರದು. ಅಂತರ್ಜಾಲ ಬಳಕೆಯಲ್ಲಿ ಎಚ್ಚರಿಕೆ ಅಗತ್ಯ
– ಬಿ.ವಿ. ರೇಣುಕಾ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಧೀಶೆ
ಜನರನ್ನು ಡಿಜಿಟಲ್ ಬಂಧನದಲ್ಲಿರಿಸಿ ಅವರ ಬ್ಯಾಂಕ್‌ ಖಾತೆಯಲ್ಲಿರುವ ಹಣವನ್ನು ವಂಚಕರು ದೋಚುತ್ತಿದ್ದಾರೆ. ಹಣದ ಜೊತೆಗೆ ಜನರ ಜೀವದ ಜೊತೆಗೂ ಆಟವಾಡುತ್ತಿದ್ದಾರೆ. ಆನ್‌ಲೈನ್ ವಂಚನೆ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ
– ಆರ್. ಶ್ರೀನಿವಾಸ ಗೌಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ
‘ಅಂತರ್ಮುಖಿಯಾಗುತ್ತಿರುವ ಮಕ್ಕಳು’
‘ಇಂದು ಮೊಬೈಲ್ ಇಲ್ಲದ ಮನೆಯೇ ಇಲ್ಲವಾಗಿದೆ. ಮೊಬೈಲ್‌ನಲ್ಲಿ ಹೆಚ್ಚು ಕಾಲ ಕಳೆಯುತ್ತಿರುವ ಮಕ್ಕಳು ಅಂತರ್ಮುಖಿಗಳಾಗುತ್ತಿದ್ದಾರೆ. ತಂದೆ–ತಾಯಿ ಸೇರಿದಂತೆ ಕುಟುಂಬದ ಸದಸ್ಯರ ಜೊತೆ ಸರಿಯಾಗಿ ಮಾತು ಸಹ ಆಡುತ್ತಿಲ್ಲ. ಮೊಬೈಲ್ ಅವರ ಪ್ರಪಂಚವಾಗಿದ್ದು ಬೆಳಿಗ್ಗೆಯಿಂದ ಸಂಜೆವರೆಗೂ ಮೊಬೈಲ್‌ನಲ್ಲೇ ಮುಳುಗಿರುತ್ತಾರೆ. ಪೋಷಕರು ಮಕ್ಕಳಿಗೆ ಮೊಬೈಲ್‌ ನೀಡುವುದನ್ನು ನಿಲ್ಲಿಸಬೇಕು. ಮಕ್ಕಳು ಮೊಬೈಲ್‌ನಲ್ಲಿ ಏನನ್ನಾದರೂ ಒತ್ತಿದಾಗ ಅಲ್ಲಿರುವ ವೈಯಕ್ತಿಕ ದತ್ತಾಂಶವು ಬೇರೆಯವರಿಗೆ ಹೋಗಿ ದುರುಪಯೋಗ ಅಥವಾ ವಂಚನೆಯಾಗುವ ಸಾಧ್ಯತೆ ಇರುತ್ತದೆ’ ಎಂದು ಇಂದ್ರೇಶ್ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT