‘ರಾಮನಗರ ಜಿಲ್ಲೆಯ ಮೂರ್ನಾಲ್ಕು ಮಂದಿಯೂ ಪೊಲೀಸ್ ಪರೀಕ್ಷೆಯಲ್ಲಿ ಆಯ್ಕೆಯಾಗಿದ್ದು, ನಮಗೆ ಬೇಕಾದ ಹುಡುಗರೂ ಇದ್ದಾರೆ. ಈಗ ವಿಚಾರಣೆ ಎದುರಿಸುತ್ತಿದ್ದಾರೆ. ಅವರಿಗೆ ಅಕ್ರಮದಲ್ಲಿ ಮಂತ್ರಿಗಳು ಸಹಾಯ ಮಾಡಿದ್ದಾರೋ ಇಲ್ಲ ಅವರ ಸಂಬಂಧಿಕರು ಸಹಾಯ ಮಾಡಿದ್ದಾರೋ ಗೊತ್ತಿಲ್ಲ. ಅಂಗಡಿ ತೆರೆದಾಗ ಗ್ರಾಹಕರು ಬರುವುದು ಸಹಜ. ಸರ್ಕಾರ ಭ್ರಷ್ಟಾಚಾರಕ್ಕೆ ಮುಂದಾಗಿದ್ದರಿಂದಲೇ ಕೆಲವರು ನೌಕರಿ ಆಸೆಗೆ ಸಾಲ–ಸೋಲ ಮಾಡಿ ಹಣ ಕೊಟ್ಟು ಈಗ ಸಿಕ್ಕಿಹಾಕಿಕೊಂಡಿದ್ದಾರೆ’ ಎಂದರು.