ಸುಪ್ರೀಂ ಕೋರ್ಟ್ ತೀರ್ಪು ಕುರಿತು ತಾಲ್ಲೂಕಿನ ಕಲ್ಲುದೇವನಹಳ್ಳಿಯಲ್ಲಿ ಮಂಗಳವಾರ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ‘ಡಿ.ಕೆ. ಶಿವಕುಮಾರ್ ಅವರ ಮೇಲೆ ನಡೆದಿದ್ದ ಜಾರಿ ನಿರ್ದೇಶನಾಲಯದ (ಇ.ಡಿ) ದಾಳಿ ರಾಜಕೀಯ ಪ್ರೇರಿತವಾಗಿದ್ದು, ಅವರ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಲಾಗಿದೆ ಎಂದು ನಾವು ಪದೇ ಪದೇ ಹೇಳುತ್ತಾ ಬಂದಿದ್ದೆವು’ ಎಂದರು.
‘ಪ್ರಕರಣದಲ್ಲಿ ನಮಗೆ ನ್ಯಾಯ ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸುತ್ತಾ ಬಂದಿದ್ದೆವು. ಅದರಂತೆ, ಕೋರ್ಟ್ ಪ್ರಕರಣವನ್ನು ವಜಾಗೊಳಿಸಿದೆ. ಇದರಿಂದ ಕೋರ್ಟ್ ಮೇಲಿನ ಗೌರವ ಹೆಚ್ಚಾಗಿದೆ’ ಎಂದು ತಿಳಿಸಿದರು.