ಹಿಂದೆ ಸಂಘದಲ್ಲಿ ಲಕ್ಷಾಂತರ ರೂಪಾಯಿ ಹಣ ದುರುಪಯೋಗ ಮಾಡಿಕೊಂಡಿದ್ದ ವ್ಯಕ್ತಿಯ ಸಂಬಂಧಿಯನ್ನೇ ಕಾರ್ಯದರ್ಶಿಯಾಗಿ ನೇಮಿಸಿದ್ದರು. ಈಗಿನ ನಿತ್ಯಾನಂದ ಅವರ ನೇಮಕದ ಹಿಂದೆ ಅಂದಿನ ಅಕ್ರಮ ಮುಚ್ಚಿ ಹಾಕುವ ಸಂಚಿದೆ. ಇದರಿಂದಾಗಿ ಸಂಘದ ಆಡಳಿತವು ಹಾದಿ ತಪ್ಪಲಿದೆ ಎಂದು ದೂರಿದರು.
ಸಂಘಕ್ಕೆ ಕಾರ್ಯದರ್ಶಿ ನೇಮಕ ಮಾಡುವ ಕುರಿತು ಗ್ರಾಮದಲ್ಲಿ ಪರ–ವಿರೋಧ ನಡೆಯುತ್ತಲೇ ಇದ್ದು, ಇದೀಗ ಪ್ರತಿಭಟನೆಯ ರೂಪ ತಾಳಿದೆ. ಭಾನುವಾರ ಸಹ ಸಂಘದ ಎದುರು ಕೆಲವರು ಹಾಲು ಸುರಿದು ಪ್ರತಿಭಟನೆ ನಡೆಸಿದರು. ಇದೀಗ, ಜಿಲ್ಲಾಕೇಂದ್ರಕ್ಕೆ ಬಂದು ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆಗೆ ಜೆಡಿಎಸ್ ಮುಖಂಡರು ಬೆಂಬಲ ವ್ಯಕ್ತಪಡಿಸಿದರು.
ಸಂಘಕ್ಕೆ ಹದಿಮೂರು ವರ್ಷಗಳಿಂದ ಚುನಾಯಿತ ಆಡಳಿತ ಮಂಡಳಿ ಇಲ್ಲದಿರುವುದರಿಂದ, ಆಡಳಿತಾಧಿಕಾರಿ ಮೇಲ್ವಿಚಾರಣೆಯಲ್ಲಿ ಸಂಘ ನಡೆಯುತ್ತಿದೆ.