<p><strong>ಹಾರೋಹಳ್ಳಿ:</strong> ಸ್ಮಶಾನಕ್ಕಾಗಿ ಹಲವು ವರ್ಷಗಳಿಂದ ಪರಿತಪಿಸುತ್ತಿದ್ದೇವೆ. ಈಗಾಲಾದರೂ ಪರಿಹಾರ ಒದಗಿಸಿಕೊಡಿ ಎಂದು ದೇವರಗೊಲ್ಲಹಳ್ಳಿ ದಲಿತ ಸಮುದಾಯ ಶಾಸಕರಿಗೆ ಮನವಿ ಮಾಡಿದರು.</p>.<p>ಹಾರೋಹಳ್ಳಿ ತಾಲ್ಲೂಕಿನ ಕೊಟ್ಟಗಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು. ಸ್ಮಶಾನ ಭೂಮಿ, ಗ್ರಾಮದಲ್ಲಿ ಅಂಬೇಡ್ಕರ್ ಭವನ ನಿರ್ಮಾಣಕ್ಕೂ ಆದ್ಯತೆ ನೀಡಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದರು.</p>.<p>ಶಾಸಕ ಇಕ್ಬಾಲ್ ಹುಸೇನ್ ಕೂಡಲೇ ಅಧಿಕಾರಿಗಳಿಂದ ಮಾಹಿತಿ ಪಡೆದರು. ಕೂಡಲೇ ಸ್ಪಂದಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು. </p>.<p>ಕೊಟ್ಟಗಾಳು ಗ್ರಾಮ ಪಂಚಾಯಿತಿ ದೊಡ್ಡ ಕಲ್ಲುಬಾಳು, ಸಿದ್ದೇನಹಳ್ಳಿ, ಪಿಚ್ಚನಕೆರೆ, ಗೊಲ್ಲಹಳ್ಳಿ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಸಂಚರಿಸಿದ ಶಾಸಕ ಒಟ್ಟು ₹2ಕೋಟಿ 80 ಲಕ್ಷದ ವಿವಿಧ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿದರು.</p>.<p>ತಾಲ್ಲೂಕು ಇ.ಒ ಅಪೂರ್ವ, ಬಮೂಲ್ ನಿರ್ದೇಶಕ ಹರೀಶ್ ಕುಮಾರ್, ಅಶೋಕ್, ಕೊಟ್ಟಗಾಳು ಗ್ರಾ.ಪಂ ಅಧ್ಯಕ್ಷ ಬಸವರಾಜು, ಪುಟ್ಟಮಣಿ ಪುಟ್ಟಸ್ವಾಮಿ, ಗೂಗರೇದೊಡ್ಡಿ ಪರಮೇಶ್, ಕೊಳ್ಳಿಗನಹಳ್ಳಿ ವಿ.ಎಸ್.ಎಸ್.ಎನ್ ಅಧ್ಯಕ್ಷ ರವಿ, ಸಾಮಂದಿ,ನಂಜುಂಡಸ್ವಾಮಿ ಸೇರಿದಂತೆ ಹಲವರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾರೋಹಳ್ಳಿ:</strong> ಸ್ಮಶಾನಕ್ಕಾಗಿ ಹಲವು ವರ್ಷಗಳಿಂದ ಪರಿತಪಿಸುತ್ತಿದ್ದೇವೆ. ಈಗಾಲಾದರೂ ಪರಿಹಾರ ಒದಗಿಸಿಕೊಡಿ ಎಂದು ದೇವರಗೊಲ್ಲಹಳ್ಳಿ ದಲಿತ ಸಮುದಾಯ ಶಾಸಕರಿಗೆ ಮನವಿ ಮಾಡಿದರು.</p>.<p>ಹಾರೋಹಳ್ಳಿ ತಾಲ್ಲೂಕಿನ ಕೊಟ್ಟಗಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು. ಸ್ಮಶಾನ ಭೂಮಿ, ಗ್ರಾಮದಲ್ಲಿ ಅಂಬೇಡ್ಕರ್ ಭವನ ನಿರ್ಮಾಣಕ್ಕೂ ಆದ್ಯತೆ ನೀಡಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದರು.</p>.<p>ಶಾಸಕ ಇಕ್ಬಾಲ್ ಹುಸೇನ್ ಕೂಡಲೇ ಅಧಿಕಾರಿಗಳಿಂದ ಮಾಹಿತಿ ಪಡೆದರು. ಕೂಡಲೇ ಸ್ಪಂದಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು. </p>.<p>ಕೊಟ್ಟಗಾಳು ಗ್ರಾಮ ಪಂಚಾಯಿತಿ ದೊಡ್ಡ ಕಲ್ಲುಬಾಳು, ಸಿದ್ದೇನಹಳ್ಳಿ, ಪಿಚ್ಚನಕೆರೆ, ಗೊಲ್ಲಹಳ್ಳಿ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಸಂಚರಿಸಿದ ಶಾಸಕ ಒಟ್ಟು ₹2ಕೋಟಿ 80 ಲಕ್ಷದ ವಿವಿಧ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿದರು.</p>.<p>ತಾಲ್ಲೂಕು ಇ.ಒ ಅಪೂರ್ವ, ಬಮೂಲ್ ನಿರ್ದೇಶಕ ಹರೀಶ್ ಕುಮಾರ್, ಅಶೋಕ್, ಕೊಟ್ಟಗಾಳು ಗ್ರಾ.ಪಂ ಅಧ್ಯಕ್ಷ ಬಸವರಾಜು, ಪುಟ್ಟಮಣಿ ಪುಟ್ಟಸ್ವಾಮಿ, ಗೂಗರೇದೊಡ್ಡಿ ಪರಮೇಶ್, ಕೊಳ್ಳಿಗನಹಳ್ಳಿ ವಿ.ಎಸ್.ಎಸ್.ಎನ್ ಅಧ್ಯಕ್ಷ ರವಿ, ಸಾಮಂದಿ,ನಂಜುಂಡಸ್ವಾಮಿ ಸೇರಿದಂತೆ ಹಲವರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>