ಮಾಗಡಿ: ತಾಲ್ಲೂಕಿನ ಸೋಲೂರು ಆರ್ಯ ಈಡಿಗರ ಮಹಾಸಂಸ್ಥಾನ ನಾರಾಯಣ ಗುರುಪೀಠದ ಆವರಣದಲ್ಲಿ ರೇಣುಕಾ ಯಲ್ಲಮ್ಮದೇವಿ ಆಯುಧ ಪೂಜೆ ಮತ್ತು ವಿಜಯದಶಮಿ ಮಹೋತ್ಸವ ಮಂಗಳವಾರ ನಡೆಯಿತು.
ನಾರಾಯಣ ಗುರುಮಠದ ಅಧ್ಯಕ್ಷ ವಿಖ್ಯಾತಾನಂದ ಸ್ವಾಮೀಜಿ ರೇಣುಕಾ ಯಲ್ಲಮ್ಮದೇವಿ ಉತ್ಸವ ಮೂರ್ತಿಯ ಮೆರವಣಿಗೆಗೆ ಚಾಲನೆ ನೀಡಿದರು. ತಾಲ್ಲೂಕು ಆರ್ಯ ಈಡಿಗರ ಸಂಘದ ಅಧ್ಯಕ್ಷ ಎಂ,ಜಿ.ಗೋಪಾಲ್ ಈಡಿಗ, ಕುದೂರು ಶಶಾಂಕ್ ಈಡಿಗ, ಬೆಂಗಳೂರಿನ ಸಾಹಿತಿ ನರಸಿಂಹಮೂರ್ತಿ ಹಾಗೂ ಭಕ್ತರು ಭಾಗವಹಿಸಿದ್ದರು.