ಚನ್ನಪಟ್ಟಣ ಗೊಂಬೆಗಳು ಕೇವಲ ಆಟಿಕೆಗಳು ಮಾತ್ರವಲ್ಲ. ಮಕ್ಕಳಲ್ಲಿನ ಕಲಿಕಾ ಸಾಮರ್ಥ್ಯವನ್ನು ಹೆಚ್ಚಿಸಲು ಅನುಕೂಲವಾಗಲಿದೆ. ಆಟಿಕೆಗಳಲ್ಲಿಯೇ ವರ್ಣಮಾಲೆ, ಸಂಖ್ಯೆಗಳು ಹೀಗೆ ವಿವಿಧ ಕಲಿಕೆಗೆ ಪೂರಕವಾದ ಮಾಹಿತಿ ಇರಲಿದೆ. ಈ ಹಿನ್ನೆಲೆಯಲ್ಲಿ ತೀರ ಹಿಂದುಳಿದ ಹಾಡಿಗಳನ್ನು ಗುರುತಿಸಿ ಮಾಹಿತಿ ನೀಡುವಂತೆ ಚಾಮರಾಜನಗರದ ಜಿಲ್ಲೆಯ ಅಧಿಕಾರಿಗಳಿಗೆ ಡಿಸಿಎಂ ಈಗಾಗಲೇ ಸೂಚನೆ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಇದು ರಾಜ್ಯದ ವಿವಿಧ ಪ್ರದೇಶಗಳಿಗೂ ವಿಸ್ತರಣೆ ಆಗುವ ಸಾಧ್ಯತೆ ಇದೆ.