‘ಜಿಲ್ಲೆಯ ಜೆಡಿಎಸ್–ಬಿಜೆಪಿ ಕಾರ್ಯಕರ್ತರು ಲೋಕಸಭಾ, ಜಿ.ಪಂ ಹಾಗೂ ತಾ.ಪಂ. ಚುನಾವಣೆಗಳನ್ನು ಒಗ್ಗಟ್ಟಿನಿಂದ ಮಾಡಲು ಸಾಧ್ಯವಿಲ್ಲ. ಅವರಿಬ್ಬರೂ ಸ್ಟಂಟ್ ಮಾಡಿ (ಎಚ್ಡಿಕೆ–ಯೋಗೇಶ್ವರ್) ತಬ್ಬಿಕೊಳ್ಳುತ್ತಿದ್ದಾರೆ. ಕಾರ್ಯಕರ್ತರು ಈಗಲಾದರೂ ಅವರನ್ನು ಬಿಟ್ಟು ಬದಲಾಗಿ ಬುದ್ಧಿವಂತರಾಗಬೇಕು. ಕೈನ ಒಂದೊಂದು ಬೆರಳು ಸೇರಿ ಮುಷ್ಠಿಯಾಗಿದ್ದು, ನೀವು ನಮ್ಮ ಜೊತೆ ಬಂದು ಸೇರಿಕೊಳ್ಳಿ. ನಾವು ಎಲ್ಲರನ್ನೂ ಒಟ್ಟಾಗಿ ಮುಂದಕ್ಕೆ ತೆಗೆದುಕೊಂಡು ಹೋಗುತ್ತೇವೆ. ನಿಮ್ಮ ಬದುಕು ಸಹ ಸಮೃದ್ಧಿಯಾಗುತ್ತದೆ’ ಎಂದು ಶಿವಕುಮಾರ್ ಕಾಂಗ್ರೆಸ್ಗೆ ಆಹ್ವಾನಿಸಿದರು.