ತಾಲ್ಲೂಕಿನ ಸಾತನೂರು ಹೋಬಳಿ ವ್ಯಾಪ್ತಿಯ ಮುತ್ತತ್ತಿ ಕಾವೇರಿ ವನ್ಯಜೀವಿ ವಲಯದಲ್ಲಿ ಅರಣ್ಯ ರಕ್ಷಕರು ಅರಣ್ಯದಲ್ಲಿ ಗಸ್ತು ತಿರುಗುತ್ತಿದ್ದಾಗ ಕೊಲ್ಕೋಟೆ ಹಳ್ಳದಲ್ಲಿ ಸುಮಾರು 15 ವರ್ಷದ ಆನೆ ಸತ್ತಿರುವುದು ಮಂಗಳವಾರ ಗೊತ್ತಾಗಿದೆ. ಕಾವೇರಿ ವನ್ಯಜೀವಿ ವಿಭಾಗದ ಎಸಿಎಫ್ ಅಂಕರಾಜು, ಆರ್ಎಫ್ಒ ದೇವರಾಜು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.