ಭಾಗವತ ಪುರಾಣದ ಪ್ರಕಾರ ಕಾರ್ತಿಕ ಶುಕ್ಲ ಪಾಡ್ಯಮಿ ದಿನ ಶ್ರೀಕೃಷ್ಣ ಪರಮಾತ್ಮನು ಇಂದ್ರನನ್ನು ಸೋಲಿಸಿದ ದಿನವೂ ಹೌದು. ಇಂದ್ರನ ದಾಳಿಯಿಂದ ತನ್ನ ಗೋ ಸಮೂಹವನ್ನು ರಕ್ಷಿಸಲು ಗೋಪಾಲನು ಗೋವರ್ಧನ ಗಿರಿಯನ್ನೆತ್ತಿದ ದಿನವಿದು. ಆದ್ದರಿಂದಲೇ ಇಂದು ಗೋ ಪೂಜೆ, ಗೋವರ್ಧನ ಪೂಜೆ. ಕೆಲವೆಡೆ ರೈತರು ಇದನ್ನು ಹಟ್ಟಿಹಬ್ಬವೆಂದು ಆಚರಿಸುತ್ತಾರೆ.