ಗ್ರಾಮಸ್ಥರು ನಾಯಿಗಳನ್ನು ಓಡಿಸಿ ಜಿಂಕೆಯನ್ನು ರಕ್ಷಣೆ ಮಾಡಿದ್ದಾರೆ. ಜಿಂಕೆಗೆ ತೊಂದರೆಯಾಗದಂತೆ ಅದನ್ನು ಹಿಡಿದು ಹಗ್ಗದಿಂದ ಕಟ್ಟಿ ಹಾಕಿದ್ದಾರೆ. ಬಾಯಾರಿದ್ದ ಜಿಂಕೆಗೆ ನೀರು ಕುಡಿಸಿದ್ದಾರೆ.ಅರಣ್ಯ ಇಲಾಖೆ ಸಿಬ್ಬಂದಿಗೆ ವಿಷಯ ತಿಳಿಸಿದ್ದಾರೆ.
ಸಾತನೂರು ವಿಭಾಗದ ಅರಣ್ಯ ಇಲಾಖೆ ಸಿಬ್ಬಂದಿ ಜಿಂಕೆಯನ್ನು ವಶಕ್ಕೆ ಪಡೆದು ಕೊಂಡೊಯ್ದರು. ಕುಡಿಯುವ ನೀರು ಅರಸಿ ಜಿಂಕೆ ಕಾಡಿನಿಂದ ನಾಡಿಗೆ ಬಂದಿದೆ. ಆರೋಗ್ಯ ತಪಾಸಣೆ ಬಳಿಕ ಅರಣ್ಯಕ್ಕೆ ಬಿಡಲಾಗುವುದು ಎಂದು ತಿಳಿಸಿದರು.